Advertisement

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು

08:26 AM May 15, 2022 | Team Udayavani |

15-05-2022

Advertisement

ಮೇಷ: ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ ಗಣ್ಯರ ಭೇಟಿ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಧನ ಸಂಪಾದನೆ. ಪಾಲುಗಾರಿಕೆ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ.

ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ಅಗತ್ಯ.

Advertisement

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಾದಿಗಳಲ್ಲಿ ಜಾಗ್ರತೆಯ ನಡೆ. ಮಕ್ಕಳಿಂದ ವಿಶೇಷ ಸುಖ.

ತುಲಾ: ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಾಯ ಲಾಭ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅತ್ಯಗತ್ಯ.

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ.ಸಾಂಸಾರಿಕ ಸುಖ ಉತ್ತಮ.

ಮಕರ: ನೂತನ ಮಿತ್ರರ ಸಮಾಗಮ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲಕರ ವಾತಾವರಣ

ಮೀನ: ದೂರ ಪ್ರಯಾಣ. ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ, ತೃಪ್ತಿ. ಸಾಂಸಾರಿಕವಾಗಿ ಸುಖ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next