Advertisement

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

07:16 AM Oct 04, 2024 | Team Udayavani |

04-10-2024

Advertisement

ಮೇಷ: ಕಾರ್ಯ ನಿರ್ವಹಣೆಗೆ ಅನಿಶ್ಚಿತ ವಾತಾವರಣ ಅಡ್ಡಿಯಾಗದು. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮದ ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ಊರಿನ ದೇವಾಲಯಕ್ಕೆ ಭೇಟಿ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ನಿರುತ್ಸಾಹದ ಮನೋಭಾವ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.

ಮಿಥುನ: ಹೊರಗಿನ ವಾತಾವರಣಕ್ಕೆ ಸೋತು ನಿಷ್ಕ್ರಿಯರಾಗಬೇಡಿ. ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ. ಕೃಷಿ ಕ್ಷೇತ್ರಕ್ಕೆ ಪ್ರವೇಶದಿಂದ ಅನುಕೂಲ.

ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸಹೋದ್ಯೋಗಿಗಳೊಂದಿಗೆ ಸೌಹಾರ್ದ ಪೂರ್ಣ ನಡವಳಿಕೆ. ಉದ್ಯಮದ ಅಭಿವೃದ್ಧಿಗೆ ತಡೆಯಿಲ್ಲ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿಗಳು, ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.

Advertisement

ಸಿಂಹ: ಹೆಚ್ಚು ಕಡಿಮೆ ಮಿಶ್ರಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ಕರ್ತವ್ಯದ ಹೊರೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಅಪಾರ ಯಶಸ್ಸು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಸುಶಿಕ್ಷಿತ ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ.ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.

ವೃಶ್ಚಿಕ: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯಮದ ನೌಕರರ ಪೂರ್ಣ ಸಹಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ.ಮನೆಯಲ್ಲಿ ಸಮಾಧಾನದ ವಾತಾವರಣ.

ಧನು: ಅಲ್ಪಾವಧಿಯಲ್ಲಿ ಲಾಭ ನಿರೀಕ್ಷಿಸದಿರಿ. ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ಕೃಷ್ಯುತ್ಪಾದನೆ ಮಾರಾಟದಲ್ಲಿ ಲಾಭ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ. ಹೊಸ ಉದ್ಯೋಗ ಅನ್ವೇಷಣೆ ಮುಂದುವರಿಕೆ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ಮನೆಯಲ್ಲಿ ದೇವತಾರ್ಚನೆಯ ಸಂಭ್ರಮ. ಮಹಿಳೆಯರ ಸ್ವ ಉದ್ಯೋಗ ಯೋಜನೆಗೆ ಮುನ್ನಡೆ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ ಉದ್ಯಮದಲ್ಲಿ ಪ್ರಚಂಡ ಮುನ್ನಡೆ.ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ. ಮುದ್ರಣ ಸಾಮಗ್ರಿ, ಸ್ಟೇಶನರಿ, ವಸ್ತ್ರ, ಆಭರಣ ಇತ್ಯಾದಿಗಳಿಗೆ ಅಧಿಕ ಬೇಡಿಕೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ.

ಮೀನ: ವ್ಯವಹಾರಗಳಲ್ಲಿ ಸ್ಥಿರವಾದ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ ಅಧಿಕ ಯಶಸ್ಸು. ಸಮಾಜದಲ್ಲಿ ಗೌರವ ವೃದ್ಧಿ . ಮನೆಯಲ್ಲಿ ಸಂಪೂರ್ಣ ನೆಮ್ಮದಿ.

ಜಯತೀರ್ಥ ಆಚಾರ್ಯ

Advertisement

Udayavani is now on Telegram. Click here to join our channel and stay updated with the latest news.

Next