Advertisement

Daily Horoscope: ದಿಟ್ಟ ನಿರ್ಧಾರ ಕೈಗೊಂಡು ಮುನ್ನಡೆದರೆ ಯಶಸ್ಸು ಖಂಡಿತ

07:20 AM Sep 16, 2023 | Team Udayavani |

ಮೇಷ: ಸಾರ್ವಜನಿಕ ರಂಗದಲ್ಲಿ ದುಡಿಯುವ ವ್ಯಕ್ತಿಗಳಿಗೆ ಮಹತ್ವದ ಜವಾಬ್ದಾರಿ. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ ಸಂಭವ. ವ್ಯವಹಾರ ಕ್ಷೇತ್ರದಲ್ಲಿ ಲಾಭ, ಕೀರ್ತಿ ಎರಡಕ್ಕಾಗಿಯೂ ಮೇಲಾಟ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ.

Advertisement

ವೃಷಭ: ಎಡ- ಬಲ ಗಮನಿಸಿ ಎಚ್ಚರಿಕೆಯಿಂದ ಮುಂದುವರಿದರೆ ವ್ಯವಹಾರ ಕ್ಷೇತ್ರದಲ್ಲಿ ಯಶಸ್ಸು ನಿಮ್ಮದು. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಸಮಾಧಾನಕರ.

ಮಿಥುನ: ದಿಟ್ಟ ನಿರ್ಧಾರ ಕೈಗೊಂಡು ಮುನ್ನಡೆದರೆ ಯಶಸ್ಸು ಖಂಡಿತ. ಎಂತಹ ಸನ್ನಿವೇಶವನ್ನೂ ಎದುರಿಸುವ ಮನೋಬಲ ನಿಮಗಿದೆ. ಪ್ರಾಮಾಣಿಕ ಅಧಿಕಾರಿಗಳ ಸತ್ವಪರೀಕ್ಷೆ ನಡೆಯಲಿದೆ. ಪೂರ್ವ ದಿಕ್ಕಿನಿಂದ ಶತ್ರು ಬಾಧೆ. ವಾಹನ ಉದ್ಯಮಿಗಳಿಗೆ ಲಾಭ- ನಷ್ಟ ಯಥಾಸ್ಥಿತಿ.

ಕರ್ಕಾಟಕ: ಭವಿಷ್ಯದ ಕುರಿತು ಅತಿಯಾಗಿ ಚಿಂತಿಸದಿರಿ. ಒಟ್ಟಿನಲ್ಲಿ ಮಿಶ್ರಫ‌ಲಗಳ ದಿನ ವಾಗಿ ದ್ದರೂ ಶುಭಫ‌ಲಗಳೇ ಅಧಿಕವಾಗಿರುತ್ತವೆ. ಉದ್ಯೋಗಸ್ಥ ರಿಗೆ ಉತ್ತೇಜನದ ವಾತಾವರಣ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಸಿಂಹ: ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಸರ್ವರ ಪ್ರಶಂಸೆಗೆ ಪಾತ್ರರಾಗುವ ಯೋಗವಿದೆ. ಸ್ವಂತ ವ್ಯವಹಾರದಲ್ಲಿ ಅಭೂತ ಪೂರ್ವ ಯಶಸ್ಸು. ಆಪ್ತಮಿತ್ರರಿಗೆ ಸಹಾಯ ಮಾಡುವ ಅವಕಾಶ. ನೂತನ ಗೃಹ ನಿರ್ಮಿಸುವವರಿಗೆ ಅನುಕೂಲ.

Advertisement

ಕನ್ಯಾ: ಎಲ್ಲ ವ್ಯವಹಾರಗಳೂ ನಿರೀಕ್ಷೆಯಂತೆ ನಡೆದು ಮನಸ್ಸಿಗೆ ನೆಮ್ಮದಿ. ಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ರಂಗದಲ್ಲಿ ನಿರಾತಂಕದ ಮುನ್ನಡೆ. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷಿತ ವಲಯಗಳಿಂದ ಸಕಾಲಿಕ ನೆರವು. ಲೆಕ್ಕ ಪರಿಶೋಧಕರಿಗೆ ಸಮಯದ ಒತ್ತಡ.

ತುಲಾ: ಪಂಚಮ ಶನಿಯ ಪ್ರಭಾವ ಆರೋಗ್ಯದ ಮೇಲೆ ಆಗುವುದು ಸ್ವಾಭಾವಿಕವಾಗಿದ್ದರೂ ಅಂಜ ಬೇಕಾಗಿಲ್ಲ. ದೇವತಾರ್ಚನೆ, ಧಾರ್ಮಿಕ ಗ್ರಂಥಗಳ ಅಧ್ಯಯನದಲ್ಲಿ ಆಸಕ್ತಿ. ಹತ್ತಿರದ ದೇವತಾ ಸಾನ್ನಿಧ್ಯ ಸಂದರ್ಶನ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ.

ವೃಶ್ಚಿಕ: ಅಪೇಕ್ಷಿಸಿದಷ್ಟು ಅಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಪ್ರಗತಿ. ಉದ್ಯೋಗ ರಂಗದಲ್ಲಿ ಪ್ರತಿಭೆ ತೋರಿಸಲು ಅವಕಾಶ. ವ್ಯವಹಾರ ಕ್ಷೇತ್ರದಲ್ಲಿ ಪೈಪೋಟಿ. ದೂರದ ಬಂಧುಗಳ ಆಗಮನ. ಪೂರ್ವದಿಕ್ಕಿನಿಂದ ಶುಭವಾರ್ತೆ.

ಧನು: ಉದ್ದೇಶಿತ ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರ ಮತ್ತು ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಸಾಮರ್ಥ್ಯ ವೃದ್ಧಿಗೆ ಪ್ರಯತ್ನ. ಅಲ್ಪಕಾಲೀನ ಹೂಡಿಕೆಗಳಿಂದ ಲಾಭ. ಮಕ್ಕಳ ವ್ಯಾಸಂಗಾಸಕ್ತಿ ವೃದ್ಧಿಗೆ ಪ್ರಯತ್ನ.

ಮಕರ: ಅನಿರೀಕ್ಷಿತ ಬೆಳವಣಿಗೆಗಳಿಂದ ಆತಂಕಗೊಳ್ಳಬೇಡಿ. ದೇವಾರಾಧನೆಯಲ್ಲಿ ನೆಮ್ಮದಿ ಕಂಡುಕೊಳ್ಳುವ ಪ್ರಯತ್ನ. ಮನೆಯಲ್ಲಿ ಹೆಚ್ಚುಕಡಿಮೆ ಎಲ್ಲರ ಆರೋಗ್ಯ ಉತ್ತಮ. ಖಾಸಗಿ ರಂಗದ ಉದ್ಯೋಗಸ್ಥರಿಗೆ ಕೆಲಸದ ಒತ್ತಡ.

ಕುಂಭ: ಒಂದು ಬಗೆಯಲ್ಲಿ ನಿರಾತಂಕದ ದಿನ. ಉದ್ಯೋಗ ರಂಗದಲ್ಲಿ ಅಬಾಧಿತ ಮುನ್ನಡೆ. ವ್ಯವಹಾರ ಕ್ಷೇತ್ರ ತಾನಾಗಿ ವಿಸ್ತರಣೆಗೊಳ್ಳುವ ಸೂಚನೆ. ಸಮಾಜದಲ್ಲಿ ವಿಶೇಷ ಗೌರವ ಪ್ರಾಪ್ತಿ. ಮನೆಯಲ್ಲಿ ಎಲ್ಲರ ಆರೋಗ್ಯವೂ ಸಮಾಧಾನಕರ.

ಮೀನ: ಏಳೂವರೆ ಶನಿಯ ಪ್ರಭಾವವಿದ್ದರೂ ಧರ್ಮನಿಷ್ಠೆಯ ಕಾರಣದಿಂದಾಗಿ ಹೆಚ್ಚು ಶುಭಫ‌ಲಗಳೇ ಗೋಚರವಾಗಲಿವೆ. ವಾಹನ ಸಂಬಂಧಿ ವ್ಯವಹಾರಸ್ಥರಿಗೆ ಮಧ್ಯಮವಾದರೂ ಸ್ಥಿರವಾದ ಆದಾಯ. ಸಂಗಾತಿಯಿಂದ ನಿತ್ಯದ ವ್ಯವಹಾರಗಳಿಗೆ ಸಕ್ರಿಯ ಸಹಕಾರ. ತಾಯಿಯ, ಮಾತೃಸಮಾನರ ಆರೋಗ್ಯ ಉತ್ತಮ. ಹತ್ತಿರದ ಕ್ಷೇತ್ರ ದರ್ಶನ ಸಂಭವ.

Advertisement

Udayavani is now on Telegram. Click here to join our channel and stay updated with the latest news.

Next