Advertisement

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

07:20 AM Sep 28, 2024 | Team Udayavani |

ಮೇಷ: ಹಿರಿಯರ ಆಶೀರ್ವಾದದಿಂದ ಶುಭಫ‌ಲಗಳು. ಉದ್ಯೋಗ ಕ್ಷೇತ್ರದಲ್ಲಿ ಹಿತಕರ ವಾತಾವರಣ. ಹೊಸ ಉದ್ಯಮಗಳಲ್ಲಿ ಹೂಡಿಕೆ ನಿಧಾನಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ.

Advertisement

ವೃಷಭ: ಹೊಸ ವ್ಯವಹಾರದಲ್ಲಿ ತೃಪ್ತಿಕರ ಲಾಭ. ಕೃಷ್ಯುತ್ಪಾದನೆಗಳಿಂದ ಮಧ್ಯಮ ಲಾಭ. ಸರಕಾರಿ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ.

ಮಿಥುನ: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು. ಸಮಗ್ರ ಅಭಿವೃದ್ಧಿಯ ಹೊಸ ಪರ್ವ ಆರಂಭ. ಎಲ್ಲರ ಆರೋಗ್ಯ ಸ್ಥಿತಿ ಉತ್ತಮ.

ಕರ್ಕಾಟಕ: ದೇವತಾರ್ಚನೆಯಿಂದ ಆನಂದಾನುಭೂತಿ. ಉದ್ಯೋಗ ಸ್ಥಾನದಲ್ಲಿ ಸಹಕಾರ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಕೂಡಿ ಬರುವ ಸೂಚನೆ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ.

ಸಿಂಹ: ಉದ್ಯಮದ ಎಲ್ಲ ವಿಭಾಗಗಳಲ್ಲೂ ಲಾಭದಾಯಕ ಪ್ರಗತಿ. ಉತ್ಪನ್ನಗಳ ಜನ ಪ್ರಿಯತೆ ವೃದ್ಧಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ವ್ಯವಹಾರಕ್ಕಾಗಿ ಸಣ್ಣ ಪ್ರಯಾಣ ಸಂಭವ. ಗೃಹಿಣಿಯರಿಗೆ ಸಂತೃಪ್ತಿಯ ಮನೋಭಾವ.

Advertisement

ಕನ್ಯಾ: ಕ್ಷುದ್ರ ಆಮಿಷಗಳಿಗೆ ಬಲಿಯಾಗದಿರಿ ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ. ಕೃಷಿಭೂಮಿಯ ಅಭಿವೃದ್ಧಿ ಕಾರ್ಯಗಳು ಆರಂಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ತುಲಾ: ಸಕಾರಾತ್ಮಕ ಚಿಂತನೆ ಇರಲಿ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿ ಗಳಿಗೆ ನ್ಯಾಯಾಲಯದಲ್ಲಿ ಜಯ. ಮಹಿಳೆಯರ ಸ್ವಾವಲಂಬನೆ ಯೋಜನೆಗಳಿಗೆ ಲಾಭದಾಯಕ ಪ್ರಗತಿ.ಎಲ್ಲರ ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ವೃಶ್ಚಿಕ: ಹೇಳುವಂತಹ ಉನ್ನತಿಯಾಗದಿದ್ದರೂ ಪ್ರಗತಿಗೆ ಕೊರತೆ ಇರಲಾರದು.ಮಕ್ಕಳ ಉದ್ಯಮದ ಕೀರ್ತಿ ವರ್ಧನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ದೂರದಲ್ಲಿರುವ ಬಂಧುಗಳ ಆಗಮನ.

ಧನು: ಉದ್ಯೋಗ ಸ್ಥಾನದಲ್ಲಿ ಅನುಕೂಲ ವಾತಾವರಣ. ಸ್ವಂತ ಉದ್ಯಮ ಸ್ಥಿರವಾದ ಪ್ರಗತಿ. ದೀರ್ಘಾವಧಿ ಯೋಜನೆಗಳಲ್ಲಿ ಹೂಡಿಕೆಯಿಂದ ಲಾಭ. ಲೇವಾದೇವಿ ವ್ಯವಹಾರದಲ್ಲಿ ನಷ್ಟ ಸಂಭವ. ಗೃಹೋದ್ಯಮಗಳಿಂದ ತೃಪ್ತಿಕರ ಲಾಭ.

ಮಕರ: ಅತಿ ಶೀಘ್ರ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ ಲಾಭ. ತೋಟಗಾರಿಕೆಯಲ್ಲಿ ಆಸಕ್ತಿ. ಹಿರಿಯರು, ಮಹಿಳೆಯರು, ಮಕ್ಕಳಿಗೆ ನೆಮ್ಮದಿಯ ದಿನ.

ಕುಂಭ: ಉದ್ಯೋಗ, ವ್ಯವಹಾರಗಳ ಆತಂಕ ದೂರ. ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸೇವಾ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಮೀನ: ಉದ್ಯೋಗದಲ್ಲಿ ಯಶಸ್ಸು. ಸರಕಾರಿ ನೌಕರರ ಪೂರ್ಣ ಸಹಕಾರ. ಪೂರ್ವಜರ ಆಶೀರ್ವಾದ ಯಾಚನೆ. ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ.ಗುರುಗಳ ಅಥವಾ ಗುರುಸಮಾನರ ಭೇಟಿಯ ಸಾಧ್ಯತೆ.

Advertisement

Udayavani is now on Telegram. Click here to join our channel and stay updated with the latest news.

Next