Advertisement

ರಾಶಿ ಫಲ; ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ ಸಂಭವ

07:23 AM Sep 30, 2022 | Team Udayavani |

ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

Advertisement

ವೃಷಭ: ಧೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ, ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ: ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ: ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ: ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

Advertisement

ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುದು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ಆರೋಗ್ಯ ಸುದೃಢ. ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷಪ್ರದ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಅಧ್ಯಯನ ಪ್ರವೃತ್ತಿಯವರಿಗೆ ಸದವಕಾಶ ಲಭ್ಯ. ಗುರುಹಿರಿಯರ ಮಾರ್ಗದರ್ಶನ ಲಭ್ಯ.

ವೃಶ್ಚಿಕ: ಉತ್ತಮ ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ದೀರ್ಘ‌ ಪ್ರಯಾಣಗಳಿಂದ ನಿರೀಕ್ಷಿತ ಕಾರ್ಯಗಳಲ್ಲಿ ಪ್ರಗತಿ.

ಧನು: ಮಾನಸಿಕ ಗೊಂದಲಗಳಿದ್ದರೂ ಶಾರೀರಿಕ ಸುಖ ಉತ್ತಮ. ಅನಿರೀಕ್ಷಿತ ಧನಾಗಮ. ಮಾತಿ ನಲ್ಲಿ ಎಚ್ಚರವಿರಲಿ. ಸಹೋದ್ಯೋಗಿಗಳ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ ಸಂಭವ. ನೂತನ ಮಿತ್ರರ ಸಮಾಗಮ.

ಮಕರ: ಆರೋಗ್ಯ ಉತ್ತಮ ಆದರೂ ಶಿಸ್ತಿನ ಕೊರತೆ ಆಗದಂತೆ ಗಮನಹರಿಸಿ. ವಾಕ್‌ ಚತುರತೆಯಿಂದ ಕೆಲಸಕಾರ್ಯಗಳಲ್ಲಿ ಜಯ. ಉತ್ತಮ ಧನಾರ್ಜನೆ. ಸಹೋದರ ಸಮಾನರು, ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸ್ಪಂದನ.

ಕುಂಭ: ಮಧ್ಯಮ ಆರೋಗ್ಯ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ದೂರ ಪ್ರಯಾಣ ಸಂಭವ. ಅಧಿಕ ಧನಾರ್ಜನೆ. ಮಿತ್ರರಿಂದಲೂ ಬಂಧುಗಳಿಂದಲೂ ಉತ್ತಮ ಸಹಕಾರ. ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದಿಂದ ಕೂಡಿದ ದಿನ.

ಮೀನ: ಆರೋಗ್ಯ ಉತ್ತಮ. ಧನಾರ್ಜನೆ ತೃಪ್ತಿದಾಯಕ. ಅನ್ಯರ ಸಹಾಯ ದೊರಕದು. ಸ್ವಂತ ಪರಿಶ್ರಮದ ಮೇಲೆ ಗಮನವಿರಲಿ. ವ್ಯವಹಾರ ಉದ್ಯೋಗದಲ್ಲಿ ಸಾವಧಾನದ ಪ್ರಗತಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ. ವಿದ್ಯಾರ್ಥಿಗಳಿಗೆ, ಗುರುಹಿರಿಯರಿಗೆ ಸಂತೋಷದಿಂದ ಕೂಡಿದ ದಿನ.

Advertisement

Udayavani is now on Telegram. Click here to join our channel and stay updated with the latest news.

Next