Advertisement

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

07:19 PM Jul 28, 2024 | Suhan S |

ಮೇಷ: ಒಂದೇ ಕಾರ್ಯದಲ್ಲಿ ಶ್ರಮವನ್ನು ಕೇಂದ್ರೀಕರಿಸುವುದು ಒಳ್ಳೆಯದು. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ ಮುಂದುವರಿಕೆ, ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಅದೃಷ್ಟ.. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

Advertisement

ವೃಷಭ: ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ.  ಅಧ್ಯಾಪಕರಿಗೆ ಆನಂದದ ದಿನ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.ಯಂತ್ರೋಪಕರಣ ವ್ಯಾಪಾರಿಗಳಿಗೆ ಅನುಕೂಲ.

ಮಿಥುನ: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.

ಕರ್ಕಾಟಕ: ಅಷ್ಟಮ ಶನಿಯ ಬಾಧೆಯಿಂದ ಮಾನಸಿಕ ಕಿರಿಕಿರಿ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ   ಸೌಲಭ್ಯಗಳ ಸುಧಾರಣೆಗೆ ರಾಜಕಾರಣಿಗಳ ನಿರ್ಲಕ್ಷ್ಯ. ಚಾರಿತ್ರ್ಯವಂತರ  ಹೆಸರು ಕೆಡಿಸಲು ಸಂಚು.

ಸಿಂಹ: ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ.  ಉದ್ಯಮದ ಆಡಳಿತ ಸುಧಾರಣೆಗೆ ಕ್ಷಿಪ್ರ ಕ್ರಮ. ಮನೆಯಲ್ಲಿ ದೇವತಾರ್ಚನೆ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ. ಕೃಷಿ ಭೂಮಿಯಲ್ಲಿ ಶಾಶ್ವತ ನೀರಿನ ವ್ಯವಸ್ಥೆಗೆ ಪ್ರಯತ್ನ.

Advertisement

ಕನ್ಯಾ: ಉದ್ಯೋಗದಲ್ಲಿ ಸ್ಥಿರವಾಗುವ ಪ್ರಯತ್ನವಿರಲಿ.  ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆಯ ಸಣ್ಣ ಉದ್ಯಮ  ಪ್ರಗತಿ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ  ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ತುಲಾ: ಪಂಚಮ ಶನಿಯ ಪ್ರಭಾವದಿಂದ ಕೊಂಚ ಅನಾರೋಗ್ಯ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.  ಪೈಪೋಟಿ ಎದುರಿಸಲು ಉದ್ಯಮಿಗಳ ಸಿದ್ಧತೆ. ಲೇವಾದೇವಿ ವ್ಯವಹಾರದಿಂದ ದೂರವಿರಿ. ನ್ಯಾಯಾಲಯ ವ್ಯವಹಾರದಲ್ಲಿ ಅಂತಿಮ ವಿಜಯ.

ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ವಸ್ತ್ರ, ಆಭರಣ, ಗೃಹ ಸಾಮಗ್ರಿ  ಖರೀದಿ.

ಧನು: ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು.ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ.

ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ  ವಿಜಯ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಬಂಧುಗಳ ಮನೆಯಲ್ಲಿ ದೇವತಾಕಾರ್ಯ.

ಕುಂಭ: ಕೆಲಸ, ಕಾರ್ಯಗಳು ಸುಗಮವಾದರೂ ಕೆಲವು ಸಮಸ್ಯೆಗಳು. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ.ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸ.

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ.ಪುನರಾರಂಭಗೊಂಡ ಉದ್ಯಮ ಮುನ್ನಡೆ.  ದೇವತಾ ಸಾನ್ನಿಧ್ಯಕ್ಕೆ ಭೇಟಿ. ಅರ್ಹರಾದ ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.

Advertisement

Udayavani is now on Telegram. Click here to join our channel and stay updated with the latest news.

Next