Advertisement

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

07:54 AM Sep 24, 2024 | Team Udayavani |

ಮೇಷ: ಮನಸ್ಸಿನ ಸ್ವಾಸ್ಥ್ಯವನ್ನು ಕಾಯ್ದುಕೊಳ್ಳುವ ಪ್ರಯತ್ನ. ಉದ್ಯೋಗಸ್ಥರು, ವ್ಯವಹಾರಸ್ಥರಿಗೆ ಶುಭ ಸೂಚನೆ. ಹಳೆಯದಾದ ಜಟಿಲ ಸಮಸ್ಯೆಗೆ ಪರಿಹಾರ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ.

Advertisement

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಗುರುಸಮಾನರ ಅಕಸ್ಮಾತ್‌ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ಪರೀಕ್ಷಾ ತಯಾರಿಗೆ ಗಮನ.

ಮಿಥುನ: ಪೂರ್ವಜರ ಸ್ಮರಣೆಯಿಂದ ಹಿತ. ಕುಟುಂಬದ ಕ್ಷೇಮದ ಕುರಿತು ಚಿಂತನೆ. ಜೀವನದಲ್ಲಿ ಹಿರಿಯರ ಆರೋಗ್ಯದತ್ತ ಗಮನವಿರಲಿ. ಉತ್ತರ ದಿಕ್ಕಿನಿಂದ ಶುಭ ಸಮಾಚಾರ ನಿರೀಕ್ಷೆ. ಸಣ್ಣ ಪ್ರಯಾಣದ ಸಾಧ್ಯತೆ.

ಕರ್ಕಾಟಕ: ನಾಮಸ್ಮರಣೆಯ ಮೂಲಕ ಖಿನ್ನತೆಯನ್ನು ತೊಲಗಿಸಿ. ಉದ್ಯೋಗ, ವ್ಯವಹಾರದಲ್ಲಿ ಯಶಸ್ಸಿನತ್ತ ದಾಪುಗಾಲು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಹಿರಿಯರು, ಗೃಹಿಣಿ, ಮಕ್ಕಳಿಗೆ ಆನಂದ.

ಸಿಂಹ: ಕಾರ್ಯತತ್ಪರರಿಗೆ ಶ್ಲಾಘನೆ. ಹೊಸ ಅವಕಾಶ ಅನ್ವೇಷಣೆ. ಗೆಳೆಯರಿಂದ ಸಹಕಾರ. ಅನಿರೀಕ್ಷಿತ ಧನಾಗಮ. ಗುರುಹಿರಿಯರ ಮಾರ್ಗದರ್ಶನದಿಂದ ಕಾರ್ಯ ಯಶಸ್ವಿ. ವ್ಯವಹಾರದ ಸಂಬಂಧ ಪ್ರಯಾಣ ಮುಂದಕ್ಕೆ.

Advertisement

ಕನ್ಯಾ: ಆವಶ್ಯಕತೆಗೆ ಸರಿಯಾಗಿ ಧನಾಗಮ. ದೂರದಿಂದ ಶುಭವಾರ್ತೆ. ವಾಹನ ಖರೀದಿ ಯೋಜನೆ ಮುನ್ನಡೆ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ ಆರೋಗ್ಯ ಗಮನಿಸಿ. ಉದ್ಯೋಗ ಅನ್ವೇಷಣೆಯಲ್ಲಿ ಪ್ರಗತಿ.

ತುಲಾ: ಚಿತ್ತ ಚಾಂಚಲ್ಯಕ್ಕೆ ಎಡೆಗೊಡದಿರಿ. ಪತಿ- ಪತ್ನಿಯರೊಳಗೆ ಪರಸ್ಪರ ಸಹಕಾರ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಮಾರ್ಗದರ್ಶನ ಲಭ್ಯ. ಮಕ್ಕಳಿಂದ ಮನೆಯಲ್ಲಿ ಸಂತಸ.

ವೃಶ್ಚಿಕ: ಸತ್ಕರ್ಮಗಳ ಫ‌ಲ ಲಭಿಸುವ ಸಮಯ. ಹಿರಿಯರಿಗೆ ಆರೋಗ್ಯ ಉತ್ತಮ. ತಾಳ್ಮೆಯಿಂದ ಕಾರ್ಯದಲ್ಲಿ ಯಶಸ್ಸು.ಆಯೋಜಿತ ಕಾರ್ಯ ಮುಂದೂಡಿಕೆ. ಗೃಹಿಣಿಯರಿಗೆ, ಮಕ್ಕಳಿಗೆ ಶುಭದಿನ.

ಧನು: ಸಮಾಧಾನದ ವರ್ತನೆಯಿಂದ ಸಕಲ ಕಾರ್ಯಸಿದ್ಧಿ. ವಸ್ತ್ರೋದ್ಯಮಿಗಳಿಗೆ ಲಾಭ. ಉದ್ಯೋಗಸ್ಥರಿಗೆ ಮಂದ ಗತಿಯಲ್ಲಿ ಮುನ್ನಡೆ. ಉದ್ಯೋಗ ಅನ್ವೇಷಣೆ ಯಶಸ್ವಿ. ನಿಲ್ಲಿಸಿದ್ದ ವ್ಯವಹಾರ ಪುನರಾರಂಭಕ್ಕೆ ಚಿಂತನೆ.

ಮಕರ: ನಡೆನುಡಿಯಲ್ಲಿ ಸಮಾಧಾನವಿರಲಿ. ಉದ್ಯೋಗ, ವ್ಯವಹಾರ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ ಲಾಭ. ದೇವತಾರ್ಚನೆಯಲ್ಲಿ ಆಸಕ್ತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಶುಭ. ಕೃಷಿಯಲ್ಲಿ ತೊಡಗಲು ಆಸಕ್ತಿ.

ಕುಂಭ: ಸೇವಾ ಕಾರ್ಯಗಳಲ್ಲಿ ಆಸಕ್ತಿ ಉದ್ಯೋಗಸ್ಥರಿಗೆ ಹುದ್ದೆಯಲ್ಲಿ ಪದೋನ್ನತಿ ಸಂಭವ. ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಯಾಸಂಗಾಸಕ್ತರಿಗೆ ಅನುಕೂಲದ ವಾತಾವರಣ. ಹಿರಿಯರಿಗೆ, ಮಕ್ಕಳಿಗೆ ಸಂತಸದ ವಾತಾವರಣ. ಕೃಷ್ಯುತ್ಪನ್ನದಿಂದ ಲಾಭ.

ಮೀನ: ದೂರದ ಸ್ಥಳಕ್ಕೆ ಭೇಟಿ ಸಂಭವ. ಹೊಸ ಕಾರ್ಯಾರಂಭಕ್ಕೆ ವಿಘ್ನ. ದಾಯಾದಿಗಳಿಂದ ಸಹಕಾರ. ಕೃಷ್ಯುತ್ಪನ್ನಗಳಿಂದ ಲಾಭ. ಹಿರಿಯರ, ಗೃಹಿಣಿಯರ,ಮಕ್ಕಳ ಆರೋಗ್ಯ ಸ್ಥಿರ. ಸರಕಾರಿ ಅಧಿಕಾರಿಗಳಿಂದ ಸಹಾಯದ ಭರವಸೆ.

Advertisement

Udayavani is now on Telegram. Click here to join our channel and stay updated with the latest news.

Next