Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:39 AM Jun 15, 2022 | Team Udayavani |

ಮೇಷ:

Advertisement

ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರು ಹಿರಿ ಯರ ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು. ಗೃಹದಲ್ಲಿ ನೆಮ್ಮದಿ.

ವೃಷಭ:

ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮ ನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃ ತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ:

Advertisement

ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ಪಾಲು ದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮನ. ಧಾರ್ಮಿಕ ಕಾರ್ಯಕ್ಕೆ ಧನ ವ್ಯಯ.

ಕರ್ಕ:

ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.

ಸಿಂಹ:

ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.

ಕನ್ಯಾ:

ದೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ತುಲಾ:

ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣವಾಗದಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಗುರಿ ಸಾಧಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚು ಪರಿಶ್ರಮ ಅಗತ್ಯ.

ವೃಶ್ಚಿಕ:

ಆರೋಗ್ಯ ವೃದ್ಧಿ. ಹೆಚ್ಚಿದ ಸ್ಥಾನಮಾನ ಗೌರವ. ಬಂಧು ಮಿತ್ರರ ಸಹಕಾರ. ಕೈತುಂಬಾ ಉದ್ಯೋಗ ವ್ಯವಹಾರ ಸಂಭವ. ಸಾಂಸಾರಿಕ ಸುಖ ವೃದ್ಧಿ. ಗುರು ಹಿರಿಯರ ಉತ್ತಮ ಸಹಾಯ ಮಾರ್ಗದರ್ಶನ ಪ್ರಾಪ್ತಿ.

ಧನು:

ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ದೀರ್ಘ‌ ಪ್ರಯಾಣದಿಂದ ಲಾಭ. ನೂತನ ಮಿತ್ರರ ಸಮಾಗಮ. ಆಸ್ತಿ ಭೂಮಿ ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಮಧ್ಯಮ.

ಮಕರ:

ಮಕ್ಕಳಿಂದ ಹೆಚ್ಚಿದ ಸಂತೋಷ. ಬಹು ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ವಿಪುಲ ಅವಕಾಶ. ಸಾಂಸಾರಿಕ ಸುಖ ಪ್ರಾಪ್ತಿ. ಅನಿರೀಕ್ಷಿತ ಧನಾಗಮನ ಹಾಗೂ ಹೆಚ್ಚಿದ ಉಳಿತಾಯ. ಅಭಿವೃದ್ಧಿಯ ಮುನ್ನಡೆ.

ಕುಂಭ:

ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ. ಧನಾರ್ಜನೆ ಉತ್ತಮ. ವಿದ್ಯಾ ರ್ಥಿಗಳಿಗೆ ಅನಿರೀಕ್ಷಿತ ಅವಕಾಶ. ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿದಾಯಕ.

ಮೀನ:

ಗೃಹೋಪಯೋಗಿ ವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸಹಕಾರ ಸಂಭವ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಹಣ ಕಾಸಿನ ವಿಚಾರದಲ್ಲಿ ಅಭಿವೃದ್ದಿ. ವಾಹನ ಚಾಲನೆ ಹಾಗೂ ಪ್ರಯಾಣದ ವೇಳೆ ಜಾಗರೂಕರಾಗಿರಿ

Advertisement

Udayavani is now on Telegram. Click here to join our channel and stay updated with the latest news.

Next