Advertisement

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:14 AM May 17, 2022 | Team Udayavani |

ಮೇಷ:

Advertisement

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ:

ಧೈರ್ಯ ಶೌರ್ಯ ಪರಾಕ್ರಮ ದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗ ದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

Advertisement

ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ:

ಸಾಂಸಾರಿಕ ಸುಖ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಅಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃಸಂತೋಷ.

ವೃಶ್ಚಿಕ:

ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.

ಧನು:

ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ:

ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ:

ಆರೋಗ್ಯ ಉತ್ತಮ. ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದ ರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿಕರ.

ಮೀನ:

ಆರೋಗ್ಯ ಗಮನಿಸಿ. ಸಂಸಾರದಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮನೆಯಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

Advertisement

Udayavani is now on Telegram. Click here to join our channel and stay updated with the latest news.

Next