Advertisement

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

06:30 PM Sep 27, 2024 | Team Udayavani |

ಹತ್ರಾಸ್‌ (ಉತ್ತರ ಪ್ರದೇಶ): ಇಲ್ಲಿನ ಶಾಲೆಯೊಂದರ ಮಾಲಕರು ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನು ಬಲಿ ನೀಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ಘಟನೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಶಾಲೆಯ ಮಾಲಕ, ನಿರ್ದೇಶಕರಲ್ಲದೆ, ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರನ್ನು ಸಹ ಬಂಧಿಸಲಾಗಿದೆ.

ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಎಲ್ ಪಬ್ಲಿಕ್ ಸ್ಕೂಲ್ ಮಾಲಕ ಜಸೋಧನ್ ಸಿಂಗ್ ಅವರು ‘ತಾಂತ್ರಿಕ ಆಚರಣೆಗಳನ್ನು’ ನಂಬಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ, ಶಾಲೆ ಮತ್ತು ಅವರ ಕುಟುಂಬದ ಏಳಿಗೆಗಾಗಿ ಮಗುವನ್ನು ಬಲಿ ನೀಡುವಂತೆ ಶಾಲೆಯ ನಿರ್ದೇಶಕ ದಿನೇಶ್ ಬಘೇಲ್ ಅವರನ್ನು ಕೇಳಿದ್ದಾರೆ ಎಂದು ಹೇಳಲಾಗಿದೆ. ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್ ಮತ್ತು ಇಬ್ಬರು ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ ಮತ್ತು ವೀರಪಾಲ್ ಸಿಂಗ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಬಲಿಯಾದ ವಿದ್ಯಾರ್ಥಿಯನ್ನು ಡಿಎಲ್ ಪಬ್ಲಿಕ್ ಶಾಲೆಯ ಎರಡನೇ ತರಗತಿಯಲ್ಲಿ ಓದುತ್ತಿದ್ದ ಕೃತಾರ್ಥ್ (11) ಎಂದು ಗುರುತಿಸಲಾಗಿದೆ ಎಂದು ಹತ್ರಾಸ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಅಶೋಕ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

Advertisement

“ಸೆಪ್ಟೆಂಬರ್ 23 ರಂದು, ಶಿಕ್ಷಕ ರಾಮಪ್ರಕಾಶ್ ಸೋಲಂಕಿ, ದಿನೇಶ್ ಬಾಘೇಲ್ ಮತ್ತು ಶಾಲೆಯ ಮಾಲಕ ಜಸೋಧನ್ ಸಿಂಗ್ ಅವರು ಶಾಲೆಯ ಹಾಸ್ಟೆಲ್‌ನಿಂದ ವಿದ್ಯಾರ್ಥಿಯನ್ನು ಅಪಹರಿಸಿದ್ದರು. ಜಸೋಧನ್ ಸಿಂಗ್ ಅವರು ‘ತಂತ್ರ’ ಅಭ್ಯಾಸ ನಂಬಿದ್ದು, ಶಾಲೆ ಮತ್ತು ಅವರ ಕುಟುಂಬದ ಏಳಿಗೆಗಾಗಿ ಮಗುವನ್ನು ತ್ಯಾಗ ಮಾಡುವಂತೆ ಕೇಳಿಕೊಂಡರು, ”ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next