Advertisement

ಪಿಕ್ಅಪ್-ಲಾರಿ ನಡುವೆ ಭೀಕರ ಅಪಘಾತ: ಇಬ್ಬರ ಸಾವು

05:31 PM Apr 23, 2022 | Team Udayavani |

ಗುಂಡ್ಲುಪೇಟೆ: ಕೇರಳದ ಸುಲ್ತಾನ್ ಬತ್ತೇರಿಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಪಿಕ್ ಅಪ್ ವಾಹನ ಹಾಗೂ ಲಾರಿ ನಡುವೆ ಢಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕೂತನೂರು ಬಳಿಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

Advertisement

ಕೇರಳದ ಕಲ್ಪೆಟ್ಟ ಮೂಲದ ಪಿಕ್ಆಪ್ ವಾಹನ್ ಚಾಲಕ ಅಜ್ಮಲ್ ಹಾಗೂ ಸಹಾಯಕ ಅಲ್ತಾಫ್ ಮೃತ ದುರ್ದೈವಿಗಳು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೇರಳ ಕಡೆಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದು ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಮುರಿದು ಬಿದ್ದ ರಿಲಯನ್ಸ್-ಫ್ಯೂಚರ್ ಗ್ರೂಪ್‌ 24,713 ಕೋಟಿ ರೂ.ಒಪ್ಪಂದ

ಘಟನಾ ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತಪಟ್ಟಿರುವ ಯುವಕರ ಮೃತದೇಹವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next