Advertisement

ವಿಭಿನ್ನ ಶೀರ್ಷಿಕೆಯ ಹಾರರ್, ಥ್ರಿಲ್ಲರ್ ಚಿತ್ರ

08:05 AM Jul 10, 2020 | Lakshmi GovindaRaj |

ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಬರುತ್ತಿರುವ ಸಿನಿಮಾಗಳ ಶೀರ್ಷಿಕೆಗಳೇ ಡಿಫರೆಂಟ್.‌ ಈ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸಿಸುವ ಕಲೆ ಇದೀಗ ಚಂದನವನದಲ್ಲಿದೆ. ಈಗ ಅಂಥದೇ ಮತ್ತೊಂದು ಚಿತ್ರ ಸೆಟ್ಟೇರಲು ರೆಡಿಯಾಗಿದೆ. ಹೌದು! “ಇದು ಆಕಾಶವಾಣಿ ಬೆಂಗಳೂರು ನಿಲಯʼ. ಕಮಲಾನಂದ ಚಿತ್ರಾಲಯ ಸಂಸ್ಥೆಯಡಿ ಶಿವಾನಂದಪ್ಪ ಬಳ್ಳಾರಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ  ನಡೆಯಿತು.

Advertisement

ಅಲ್ಲದೇ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದ ನಂತರ ಶೂಟಿಂಗ್ ಆರಂಭಿಸುವುದಾಗಿ ನಿರ್ಮಾಪಕ ಶಿವಾನಂದಪ್ಪ ತಿಳಿಸಿದ್ದು, ಈ ಹಿಂದೆ “ನಾವೇ ಭಾಗ್ಯವಂತರುʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಎಂ.ಹರಿಕೃಷ್ಣ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇನ್ನು ವಿಭಿನ್ನವಾದ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯಕುಮಾರ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು ಎ.ಟ. ರವೀಶ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಆಂಟೋನಿ ಎಂ. ಸಾಹಿತ್ಯ, ಪ್ರವೀಣ್ ಶೆಟ್ಟಿ  ಛಾಯಾಗ್ರಹಣ, ಪವನ್‍ಗೌಡ ಅವರ ಸಂಕಲನ, ಕಂಬಿರಾಜು ನೃತ್ಯನಿರ್ದೇಶನ, ಆರ್.ಪ್ರಭಾಕರ್‌ ಕಲಾನಿರ್ದೇಶನ ಚಿತ್ರಕ್ಕಿದೆ. ಅಲ್ಲದೆ ವಿನೋದ್ ಪಾಟೀಲ್, ನಿಖಿತ ಸ್ವಾಮಿ, ಎಸ್. ನಾರಾಯಣಸ್ವಾಮಿ, ದಿವ್ಯಶ್ರೀ(ಕಾಮಿಡಿ ಕಿಲಾಡಿಗಳು), ವಿಲಾಸ್‍ಗೌಡ ಮುಂತಾದವರ ತಾರಾಬಳಗವಿರುವ ಈ ಚಿತ್ರದ ಚಿತ್ರೀಕರಣವನ್ನು ಬೆಂಗಳೂರು ಹಾಗೂ ನೊಣವಿನಕೆರೆ ಸುತ್ತಮುತ್ತ ನಡೆಸುವ ಯೋಜನೆ ಚಿತ್ರತಂಡಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next