Advertisement
ಬೆಂಗಳೂರು ಹಾಲು ಒಕ್ಕೂಟದ ಹೊಸಕೋಟೆ ಡೇರಿ ಆವರಣದಲ್ಲಿ ನೂತನ ಶಿಬಿರ ಕಚೇರಿ, ಉಪಾಹಾರ ಗೃಹ, ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ವಿಶ್ವದಲ್ಲೇ ನಂ.1: ಕೃಷಿ ವಲಯಕ್ಕೆ 1 ಲಕ್ಷ 63 ಸಾವಿರ ಕೋಟಿ ರೂ.ಗಳನ್ನು, ಗ್ರಾಮೀಣಾ ಭಿವೃದ್ಧಿಗೆ 1 ಲಕ್ಷ 20 ಸಾವಿರ ಕೋಟಿ ರೂ. ಗಳನ್ನು ಮೀಸಲಿಟ್ಟಿದ್ದು ಇದರಿಂದ ಕೃಷಿ ಉತ್ಪನ್ನಗಳನ್ನು ರಫ್ತು ಮಾಡು ವಲ್ಲಿ ವಿಶ್ವದಲ್ಲಿಯೇ ಭಾರತ ಪ್ರಥಮ ಸ್ಥಾನ ಪಡೆದುಕೊಂಡಿದ್ದು ರೈತರು ಸಹ ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ. ಬಯಲುಸೀಮೆ ಪ್ರದೇಶಕ್ಕೆ ಈಗಾಗಲೇ ಎಚ್ಎನ್ ವ್ಯಾಲಿ ಯೋಜನೆಯಡಿ ನೀರು ಹರಿದುಬರುತ್ತಿದ್ದು ಎತ್ತಿನಹೊಳೆ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ದೇಶದಲ್ಲಿ 1.50 ಕೋಟಿ ಜನರು ಮೀನುಗಾರಿಕೆಯಲ್ಲಿ ತೊಡಗಿದ್ದು, ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿರುವ 70 ಕೆರೆಗಳನ್ನು ಸ್ವತ್ಛಗೊಳಿಸಿ ಅವುಗಳಲ್ಲಿ ಮೀನುಗಾರಿಕೆ ಕೈಗೊಳ್ಳಲು ಅವಕಾಶ ಮಾಡಿ ಕೊಟ್ಟಲ್ಲಿ ಸ್ವಉದ್ಯೋಗಕ್ಕೆ ಪ್ರೋತ್ಸಾಹಿಸಿ ದಂತಾಗಲಿದೆ. ಚೀನಾದಲ್ಲಿ ಪ್ರಸ್ತುತ ತಲೆದೋರಿರುವ ಕೊರೊನಾ ವೈರಸ್ ಜ್ವರದಿಂದಾಗಿ ರೇಷ್ಮೆ ಆಮದು ಸಂಪೂರ್ಣ ವಾಗಿ ನಿಲುಗಡೆಯಾಗಿರುವ ಕಾರಣ ಸ್ಥಳೀಯ ಉತ್ಪಾದಕರು ಉತ್ತಮ ಬೆಲೆ ಪಡೆಯಲು ಸಾಧ್ಯವಾಗಲಿದೆ.
Related Articles
Advertisement
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ಒಕ್ಕೂಟದ ವ್ಯಾಪ್ತಿಯಲ್ಲಿ 2181 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದು ಪ್ರತಿದಿನ 16.48 ಲಕ್ಷ ಲೀ.ಗಳಷ್ಟು ಹಾಲು ಸಂಗ್ರಹಗೊಳ್ಳುತ್ತಿದೆ. ಕನಕಪುರದಲ್ಲಿ 550 ಕೋಟಿ ರೂ.ಗಳ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸ್ವಯಂಚಾಲಿತ ಹಾಲು ಸಂಸ್ಕರಣೆ, ಹಾಲು ಉತ್ಪನ್ನಗಳ ತಯಾರಿಕಾ ಘಟಕವನ್ನು ನಿರ್ಮಿಸಿದ್ದು ದೇಶದಲ್ಲಿಯೇ ಪ್ರಥಮದ್ದಾಗಿದೆ ಎಂದು ತಿಳಿಸಿದರು.
5 ವರ್ಷದೊಳಗೆ ಕಾಮಗಾರಿ ಪೂರ್ಣ: ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್ ಮಾತನಾಡಿ 2010ರಲ್ಲಿ 47ಕೋಟಿ ರೂ.ಗಳ ವೆಚ್ಚದಲ್ಲಿ ಡೇರಿ ಪ್ರಾರಂಭಿಸಿದ್ದು ಪ್ರತಿದಿನ 2 ಲಕ್ಷ ಲೀ.ಗಳನ್ನು ಸಂಸ್ಕರಿಸಿ ಪ್ಯಾಕ್ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಸೂಕ್ತ ಜಾಗ ನೀಡಿದಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಪಶು ಆಹಾರ ಉತ್ಪಾದನಾ ಘಟಕವನ್ನು ನಿರ್ಮಿಸಲಾಗುವುದು. ಪ್ರಸ್ತುತ ಡೇರಿಯ ಆವರಣದಲ್ಲಿ ಅಂದಾಜು 5 ಕೋಟಿ ರೂ.ಗಳ ವೆಚ್ಚದಲ್ಲಿ ಶಿಬಿರ ಕಚೇರಿ, ನೌಕರರಿಗೆ ಉಪಹಾರಗೃಹ, ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು 1 ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದರು. ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾದ ಬಿ.ಸಿ.ಆನಂದಕುಮಾರ್, ಎಂ. ಮಂಜುನಾಥ್, ಬಿ.ಜಿ.ಆಂಜಿನಪ್ಪ, ಕೆ.ಎಸ್.ಕೇಶವಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಡಾ: ಜಿ.ಟಿ. ಗೋಪಾಲ್, ಡಾ: ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.