Advertisement

ಹೊಸಮೊಗ್ರು: ಅಕ್ರಮ ಮರಳು ಅಡ್ಡೆಗೆ ದಾಳಿ

12:35 AM May 05, 2023 | Team Udayavani |

ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮರಳುಗಾರಿಕೆಗೆ ಬಳಸಿದ ಎರಡು ದೋಣಿ ಹಾಗೂ ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಬಳಿಯ ಹೊಸಮೊಗ್ರು ಎಂಬಲ್ಲಿ ನಡೆದಿದೆ.

Advertisement

ಹೊಸಮೊಗ್ರು ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಡ್ರಜ್ಜಿಂಗ್‌ ಯಂತ್ರ ಬಳಸಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ್ದ ಎರಡು ದೋಣಿ ಹಾಗೂ ಒಂದು ಹಿಟಾಚಿ ಮತ್ತು ಡ್ರಜ್ಜಿಂಗ್‌ ಯಂತ್ರವನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next