Advertisement

Hosapete ; ಭೀಕರ ಅಪಘಾತದಲ್ಲಿ 7 ಜನರ ದಾರುಣ ಮೃತ್ಯು

07:01 PM Jun 30, 2023 | Team Udayavani |

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕು ವಡ್ಡರಹಳ್ಳಿ ಸೇತುವೆ ಬಳಿ ಶುಕ್ರವಾರ ಮಧ್ಯಾಹ್ನ ಎರಡು ಆಟೋ ಮತ್ತು ಲಾರಿ ನಡುವೆ ಢಿಕ್ಕಿಯಾಗಿ ಆಟೋದಲ್ಲಿದ್ದ7 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. 8 ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಲಾರಿಯ ಢಿಕ್ಕಿ ರಭಸಕ್ಕೆ ಆಟೋ ಹಲವು ಮೀಟರ್ ದೂರ ಹೋಗಿ ಬಿದ್ದಿದೆ ಎಂದು ಬಲ್ಲ ಮೂಳಗಲು ತಿಳಿಸಿವೆ. ಘಟನೆಯಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಆಟೋದಲ್ಲಿ ಬಳ್ಳಾರಿಯ ಕೌಲ್‌ಬಜಾರ್‌ನ ಗೌತಮ್ ನಗರಕ್ಕೆ ಸೇರಿದವರು ಹೊಸಪೇಟೆಗೆ ತುಂಗಭದ್ರ ಜಲಾಶಯ ನೋಡಲು ಹೊರಟಿದ್ದರು.ಎರಡು ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಈ ಇಪ್ಪತ್ತು ಜನರ ಪೈಕಿ ಒಂದು ಆಟೋದಲ್ಲಿದ್ದ ಶಾಶಮ್ಮ ಎಂಬ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಂದು ಆಟೋದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆ ವೆಚ್ಚಕ್ಕಾಗಿ ತಲಾ 50 ಸಾವಿರ ರೂ. ಪರಿಹಾರವನ್ನು ವಿತರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ. ಹೆಚ್ಚಿನ ವಿವಿರ ತಿಳಿಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next