Advertisement

ಸಚಿವ ಹೆಗಡೆ ವಿರುದ್ಧ ಹೊಸಪೇಟೆ ಬಂದ್‌;ಬಿಜೆಪಿ ಶಾಸಕರ ಬೆಂಬಲ! 

11:33 AM Jan 05, 2018 | |

ಹೊಸಪೇಟೆ : ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ  ಶುಕ್ರವಾರ ಹೊಸಪೇಟೆ ಪಟ್ಟಣದಲ್ಲಿ ಬಂದ್‌ ಆಚರಿಸುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆದಿಲ್ಲ, ನಗರದ ಶಾಲಾ ,ಕಾಲೇಜುಗಳಿಗೆ ರಜೆ ಸಾರಲಾಗಿದ್ದು,ಸರ್ಕಾರಿ ಬಸ್‌ಗಳು ಮತ್ತು ಖಾಸಗಿ ವಾಹನಗಳ ಸಂಚಾರ ವಿರಳವಾಗಿದ್ದುಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. 

ನಗರದ ವಿವಿಧೆಡೆ ಪ್ರತಿಭಟನೆ ನಡೆಸಿ ಅನಂತ್‌ ಕುಮಾರ್‌ ಹೆಗಡೆ ರಾಜೀನಾಮೆಗೆ ಆಗ್ರಹಿಸಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 

ಬಿಜೆಪಿ ಶಾಸಕ ಆನಂದ್‌ ಸಿಂಗ್‌ ಬೆಂಬಲ 

ವಿಶೇಷವೆಂದರೆ ಬಂದ್‌ಕ ರೆಗೆ ಹೊಸಪೇಟೆ ಕ್ಷೇತ್ರದ ಬಿಜೆಪಿ  ಶಾಸಕ ಆನಂದ್‌ ಸಿಂಗ್‌  ಪರೋಕ್ಷ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. 

Advertisement

ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿ ತೊರೆದ ಬಳಿಕ ಬಿಜೆಪಿ ಗೆ ಶಾಕ್‌ ಎನ್ನುವ ರೀತಿ  ಆನಂದ್‌ ಸಿಂಗ್‌  ಅವರು ಪಕ್ಷ ತರೆಯುವ ಸೂಚನೆ ನೀಡಿದ್ದಾರೆ. 

ನಗರದಲ್ಲಿ ಜ.6 ರಂದು ನಡೆಯಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯಿಂದ ದೂರವಿರಲು ಶಾಸಕ ಆನಂದ್‌ ಸಿಂಗ್‌ ನೇತೃತ್ವದ ಬಣ ತೀರ್ಮಾನಿಸಲಾಗಿದೆ ಎಂದು ಮೂಲ ಗಳು ಹೇಳು ತ್ತಿವೆ. 

ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪಕ್ಷದಲ್ಲಿನ ಆಂತರೀಕ ಭಿನ್ನಾಭಿಪ್ರಾಯಗಳಿಂದ ಬೇಸತ್ತಿರುವ ಶಾಸಕಆನಂದ್‌ಸಿಂಗ್‌ ನೇತೃತ್ವದ ಬಿಜೆಪಿ ಬಣ ಜ.6ರಂದು ನಡೆಯಲಿರುವ ಪರಿವರ್ತನಾ ಯಾತ್ರೆಯಿಂದ ಅಂತರ ಕಾಯ್ದುಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಸಂಸದ ಬಿ.ಶ್ರೀರಾಮುಲು ನೇತೃತ್ವದಲ್ಲಿ ಕೂಡ್ಲಿಗಿಯಲ್ಲಿ ನಡೆದ ಸಂಧಾನ ಸಭೆ ವಿಫ‌ಲವಾದ ನಂತರ ನಡೆದ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳು ಇದಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. 

Advertisement

Udayavani is now on Telegram. Click here to join our channel and stay updated with the latest news.

Next