Advertisement
ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆದಿಲ್ಲ, ನಗರದ ಶಾಲಾ ,ಕಾಲೇಜುಗಳಿಗೆ ರಜೆ ಸಾರಲಾಗಿದ್ದು,ಸರ್ಕಾರಿ ಬಸ್ಗಳು ಮತ್ತು ಖಾಸಗಿ ವಾಹನಗಳ ಸಂಚಾರ ವಿರಳವಾಗಿದ್ದುಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ.
Related Articles
Advertisement
ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿ ತೊರೆದ ಬಳಿಕ ಬಿಜೆಪಿ ಗೆ ಶಾಕ್ ಎನ್ನುವ ರೀತಿ ಆನಂದ್ ಸಿಂಗ್ ಅವರು ಪಕ್ಷ ತರೆಯುವ ಸೂಚನೆ ನೀಡಿದ್ದಾರೆ.
ನಗರದಲ್ಲಿ ಜ.6 ರಂದು ನಡೆಯಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯಿಂದ ದೂರವಿರಲು ಶಾಸಕ ಆನಂದ್ ಸಿಂಗ್ ನೇತೃತ್ವದ ಬಣ ತೀರ್ಮಾನಿಸಲಾಗಿದೆ ಎಂದು ಮೂಲ ಗಳು ಹೇಳು ತ್ತಿವೆ.
ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪಕ್ಷದಲ್ಲಿನ ಆಂತರೀಕ ಭಿನ್ನಾಭಿಪ್ರಾಯಗಳಿಂದ ಬೇಸತ್ತಿರುವ ಶಾಸಕಆನಂದ್ಸಿಂಗ್ ನೇತೃತ್ವದ ಬಿಜೆಪಿ ಬಣ ಜ.6ರಂದು ನಡೆಯಲಿರುವ ಪರಿವರ್ತನಾ ಯಾತ್ರೆಯಿಂದ ಅಂತರ ಕಾಯ್ದುಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಸಂಸದ ಬಿ.ಶ್ರೀರಾಮುಲು ನೇತೃತ್ವದಲ್ಲಿ ಕೂಡ್ಲಿಗಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾದ ನಂತರ ನಡೆದ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳು ಇದಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.