Advertisement

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

02:33 PM Oct 28, 2024 | Team Udayavani |

ಹೊಸಪೇಟೆ: ತ್ರೀವ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಮಗುವಿಗೆ ವೈದ್ಯರಿಂದ ತುರ್ತು ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದ ಘಟನೆ ನಗರದ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಸೋಮವಾರ (ಅ.28) ನಡೆದಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಧೋರಣೆ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ.

Advertisement

ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ಎಂಬ‌ವವರ ಪುತ್ರ ಕುಶಾಲ್ (5) ಮೃತಪಟ್ಟ ಮಗು.

ತ್ರೀವ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವನ್ನು ಕರೆದುಕೊಂಡು ಬೆಳಗ್ಗೆ 7 ಗಂಟೆಗೆ ಆಸ್ಪತ್ರೆಗೆ‌ ಭೇಟಿ‌ ನೀಡಿದಾಗ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ವೈದ್ಯರು ಇರಲ್ಲಿಲ್ಲ. ಅ. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಮಗುವಿಗೆ ಚಿಕಿತ್ಸೆ ಕೊಡಿಸಿದ್ದರು. ಮಗು ಚೆನ್ನಾಗಿದೆ ವೈದ್ಯರು ಹೇಳಿ ಕಳುಹಿಸಿದ್ದರು. ಸೋಮವಾರ ಬೆಳಗ್ಗೆ ಜ್ವರ ಹೆಚ್ಚಾಗಿದೆ ಎಂದು ಮಗುವಿನೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ತುರ್ತು ಚಿಕಿತ್ಸೆ ನೀಡಲು ವೈದ್ಯರಿರಲಿಲ್ಲ. ವೈದ್ಯರು ಸ್ಥಳದಲ್ಲಿ ಲಭ್ಯವಿದ್ದರೆ ಮಗು ಬದುಕುಳಿಯುತ್ತಿತ್ತು. ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣವಾಗಿದೆ ಎಂದು ಪೊಷಕರು ಆರೋಪಿಸಿದರು.

ನಗರದ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು

Advertisement

Udayavani is now on Telegram. Click here to join our channel and stay updated with the latest news.

Next