Advertisement
ಕಳೆದ ತಿಂಗಳು ಡಿಸೆಂಬರ್ ನಲ್ಲಿ ನಗರದ ರಾಣಿಪೇಟೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಹುಡಗರ ಕಣ್ಣಿಗೆ ಕಾಣಸಿಕ್ಕ ಯೂರೇಷಿಯನ್ ಗ್ರಿಫನ್ ಜಾತಿಯ ರಣಹದ್ಧನ್ನು ಪತ್ರಕರ್ತ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು, ಮಕ್ಕಳ ಕೈಯಿಂದ ರಕ್ಷಿಸಿ, ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕಿಗೆ ಹಸ್ತಾಂತರ ಮಾಡಿದ್ದರು.
Related Articles
ವನ್ಯಜೀವಿ ಸಂಶೋದಕ ಡಾ.ಸಮದ್ ಕೊಟ್ಟೂರು ಅವರು ರಾಷ್ಟೀಯ ರಣಹದ್ದು ತಜ್ಞರನ್ನು ಸಂಪರ್ಕಿಸಿ, ಅಪರೂಪವಾಗಿ ಕಂಡು ಬಂದ ರಣಹದ್ಧಿನ ನೈಜಗುರುತನ್ನು ಪತ್ತೆ ಮಾಡಿದರು.
Advertisement
ಬೃಹತ್ ಗಾತ್ರದ ಪಕ್ಷಿಯ ಎತ್ತರ, ಗಾತ್ರ, ತೂಕ, ಗರಿಗಳ ಬಣ್ಣ, ಮುಂತಾದ ಗುಣ, ಬಣ್ಣವನ್ನು ಪರೀಕ್ಷಿಸಿ, ಇದೊಂದು ವರ್ಷ ವಯೋಮಾನದ ಯೂರೋಪಿಯನ್ ಗ್ರಿಫನ್ ಎಂಬ ರಣಹದ್ಧು ಎಂಬುದನ್ನು ಖಚಿತ ಪಡಿಸಿದರು.
ನಿರ್ಜಲೀಕರಣದಿಂದ ಬಸವಳಿದು ನೆಲಕ್ಕೆ ಬೀಳುವುದನ್ನು ಕಾಣುತ್ತವೆ. ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಹೆಚ್ಚಾಗಿ ರಣಹದ್ಧಗಳು ಬಸವಳಿದು ನೆಲಕ್ಕೆ ಬಿದ್ದಿರುವ ಪ್ರಸಂಗಗಳು ಕಂಡು ಬಂದಿವೆ. ಅವುಗಳನ್ನು ಸಂರಕ್ಷಿಸಿ, ಚಿಕಿತ್ಸೆ ನೀಡಿ ಅವು ಚೇತರಿಸಿಕೊಂಡ ಬಳಿಕ ಮರಳಿ ಹಾರಿಬಿಡಲಾಗುತ್ತದೆ. ಅದೇ ರೀತಿ ಇದೀಗ ಈ ರಣಹದ್ಧನ್ನು ಕೂಡ ಸಮೀಪದ ಇಂಗಳಗಿ ಗ್ರಾಮದ ಬಳಿಯ ಎತ್ತರದ ಬೆಟ್ಟದ ತುದಿಯಲ್ಲಿ ಪೆಟ್ಟಿಗೆಯಿಂದ ಹೊರಬಿಟ್ಟು ಸುತ್ತಮುತ್ತಲಿನ ಪರಿಸರವನ್ನು ಅವಲೋಕಿಸಲು ಅವಕಾಶ ನೀಡಲಾಯಿತು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಟ್ಟದ ಮೇಲೆ ಹಾರಾಡಿದ ರಣಹದ್ಧು ಸುಲಲಿತವಾಗಿ ಉತ್ತರ ದಿಕ್ಕಿನ ಕಡೆ ಹಾರಿ ಕಣ್ಮರೆಯಾಯಿತು. ಈ ರಣಹದ್ದಿನ ಕಾಲಿಗೆ ವಿಶೇಷ ಗುರುತಿನ ನೀಲಿ ಬಣ್ಣ ಉಂಗುರವನ್ನು ಹಾಕಲಾಗಿದೆ. ಉಂಗುರದ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ ಸಿಯು, ಸಿಯು ಎಂದು ಮುದ್ರಿಸಲಾಗಿದೆ. ಇದನ್ನು ಆಧಾರಿಸಿ ಮುದೊಂದು ದಿನ ರಣಹದ್ದು ಹೊಸಪೇಟೆಯ ಪ್ರದೇಶದಲ್ಲಿ ಕಾಣಿಸಕೊಂಡು ರಕ್ಷಿಸಲ್ಪಟ್ಟಿತ್ತು ಎಂಬುದನ್ನು ಸುಲಭವಾಗಿ ಗುರುತಿಸಬಹುದು ಎಂದು ಡಾ. ಸಮ್ಮದ್ ಕೊಟ್ಟೂರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್.ಕಿರಣ್, ತಜ್ಞ ಪಶುವೈದ್ಯೆ ಡಾ.ವಾಣಿ, ವನ್ಯಜೀವಿ ಸಂಶೋಧಕ ಡಾ.ಸಮದ್ ಕೊಟ್ಟೂರು, ಹವ್ಯಾಸಿ ಛಾಯಾಗ್ರಾಹಕ ಶಿವಶಂಕರ ಬಣಗಾರ ಹಾಗೂ ಮೃಗಾಲಯದ ಸಿಬ್ಬಂದಿ ಹಾಜರಿದ್ದರು. ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಸ್ಫೂರ್ತಿಯಿಂದ ದೇಶ ಮುಂದಕ್ಕೆ ಕೊಂಡೊಯ್ಯಬೇಕು: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ