Advertisement

ಬಿಎಸ್‌ವೈ ಕೊಟ್ಟ ಮಾತು ಹುಸಿಯಾಗದಿರಲಿ

05:48 PM Jan 22, 2021 | Team Udayavani |

ಹೊಸಪೇಟೆ: ಪಂಚಮಸಾಲಿ ಸಮಾಜಕ್ಕೆ 2ಎಮೀಸಲಾತಿ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಅವರು ಮಠಾಧಿಧೀಶರಿಗೆ ನೀಡಿರುವ ಭರವಸೆ ಹುಸಿಗೊಳಿಸಬಾರದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

Advertisement

ನಗರದ ಹೊರವಲಯದಲ್ಲಿರುವ ಗುಂಡಾ ಸಸ್ಯೋದ್ಯಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ಭರವಸೆ ನೀಡಿ ವಚನಭ್ರಷ್ಟ ಆರೋಪ ಹೊತ್ತುಕೊಂಡರು. ಅದೇ ರೀತಿ ಯಡಿಯೂರಪ್ಪ ಕೊಟ್ಟ ಮಾತನ್ನು ಮೀರಬಾರದು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಬೇಕು. ಲಿಂಗಾಯತರ ಪ್ರಥಮ ಪಾದಯಾತ್ರೆ ಇದಾಗಿದ್ದು, ಈ ಪಾದಯಾತ್ರೆ ಲಿಂಗಾಯತರ ಒಳಿತಿಗಾಗಿ, ಮಕ್ಕಳ ಶೈಕ್ಷಣಿಕ ಏಳ್ಗೆಗಾಗಿ ಮಾಡಲಾಗುತ್ತಿದೆ. 26 ವರ್ಷಗಳಿಂದ ಶಾಂತಿ, ಸಹನೆಯಿಂದಮೀಸಲಾತಿಗಾಗಿ ಮನವಿ ನೀಡುತ್ತಿದ್ದೇವೆ. ಇದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ನಮಗೆ ಬಸವಣ್ಣರ ಶಾಂತಿ ಹಾಗೂ ಚನ್ನಮ್ಮರಂತೆ ಹೋರಾಡುವುದು ಗೊತ್ತು. ವಿಧಾನಸೌಧದ ಕಡೆಗೆ ಪಾದಯಾತ್ರೆ ಹೊರಟಿದ್ದು, ಸರ್ಕಾರ ಕೂಡಲೇ ತನ್ನ ನಿಲುವು ಪ್ರಕಟಿಸಬೇಕು ಎಂದರು. ಸರ್ಕಾರ ಮೀಸಲಾತಿ ಹೋರಾಟವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಂಪುಟ ರಚನೆಯಲ್ಲೇ ಕಾಲ ಕಳೆಯಲಾಗುತ್ತಿದೆ. ಈ ಕೂಡಲೇ ವರದಿ ತರಿಸಿಕೊಂಡು ಪರಿಶೀಲಿಸಿ ಕಲ್ಯಾಣ ಕರ್ನಾಟಕದ ಗಡಿ ಭಾಗವಾದ ಹರಪನಹಳ್ಳಿಯಲ್ಲಿ ಪಾದಯಾತ್ರೆ ಮುಗಿಸುವುದರೊಳಗೆ ಮುಖ್ಯಮಂತ್ರಿಗಳು ನಮಗೆ ಸಿಹಿ ಸುದ್ದಿ ನೀಡಬೇಕು. ಪಂಚಮಸಾಲಿ ಸಮಾಜದ 15 ಶಾಸಕರು ಸದ್ಯ ಬಿಜೆಪಿಯಲ್ಲಿದ್ದಾರೆ. ಉತ್ತರ ಕರ್ನಾಟದಲ್ಲಿ ಬಿಜೆಪಿ ಪ್ರಬಲವಾಗಲು ಪಂಚಮಸಾಲಿ ಸಮುದಾಯವೇ ಕಾರಣ. ಯಡಿಯೂರಪ್ಪನವರು ನಂಬಿಕೆ ಉಳಿಸಿಕೊಳ್ಳಬೇಕು. ಈ ಹಿಂದೆ ಕುಮಾರಸ್ವಾಮಿ ಅವರು ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡು ಅಧಿ ಕಾರ ಕಳೆದುಕೊಂಡರೋ ಹಾಗೇ ಯಡಿಯೂರಪ್ಪನವರ ವಿಷಯದಲ್ಲಿ ಆಗಬಾರದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಯಶವಂತಪುರ ರೈಲುಗಾಡಿ ದಾವಣಗೆರೆಗೂ ಓಡಿಸಲಿ

ಬಹಿರಂಗ ಸಭೆ: ಜ.29ರಂದು ಪಂಚಮಸಾಲಿ ಸಮಾಜದ ವತಿಯಿಂದ ಹರಿಹರದಲ್ಲಿ ಬೃಹತ್‌ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜನ ಸಾಗರೋಪಾದಿಯಲ್ಲಿ ಬರಲಿದ್ದಾರೆ.ವಚನಾನಂದ ಶ್ರೀಗಳು ಭಾಗವಹಿಸಿದರೆ ಸ್ವಾಗತಿಸಲಾಗುವುದು. ಸಮಾಜದ ಶಾಸಕರು, ಸಚಿವರು ಭಾಗವಹಿಸಲಿದ್ದಾರೆ ಎಂದುಶ್ರೀಗಳು ಹೇಳಿದರು.

ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಕೂಡಲಸಂಗಮದಿಂದ ಹೊಸಪೇಟೆಯವರೆಗೂ 206 ಕಿಮೀ ಕ್ರಮಿಸಲಾಗಿದೆ. ಸಮಾಜದ ಶಾಸಕರು ತಮ್ಮ ನಿಲುವನ್ನು ಪ್ರಕಟಿಸಬೇಕು. ಸರ್ಕಾರ ಈ ಹೋರಾಟವನ್ನು ಕಡೆಗಣಿಸಬಾರದು. ಈಗಾಗಲೇ ಹರಿಹರ ಪೀಠದ ಭಕ್ತರು ಕೂಡ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಮಾಜದ ಹೋರಾಟದಲ್ಲಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದರು. ಮೀಸಲಾತಿಗಾಗಿ ಹಲವು ಹೋರಾಟ ಮಾಡಲಾಗಿದೆ. ಇದು ಮಾಡು ಇಲ್ಲವೇ ಮಡಿ ಎಂಬಂತೆ ಕೊನೆಯ ಪಾದಯಾತ್ರೆ ಆಗಿದೆ. ಮಹಿಳೆಯರು, ಮಕ್ಕಳು ಸಹ ಪಾದಯಾತ್ರೆಯಲ್ಲಿಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ. ಸಮಾಜದ ಸ್ವಾಮೀಜಿಗೆ ಏನಾದರೂ ತೊಂದರೆ ಉಂಟಾದರೆ ಮುಖ್ಯಮಂತ್ರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು. ಮುಖಂಡರಾದ ಅಮರೇಶ್‌ ಕರಡಿ, ಗುಳಗಿ ವೀರೇಂದ್ರ, ಯುವರಾಜ್‌ ಇಂಡಿ, ಮಹಾಬಲೇಶ್ವರ ರೆಡ್ಡಿ, ಶಿವಾನಂದ, ರವಿ ಬಿಡ್ಡಪ್ಪ ಮತ್ತಿತರರಿದ್ದರು.

Advertisement

ಇದನ್ನೂ ಓದಿ : ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್

Advertisement

Udayavani is now on Telegram. Click here to join our channel and stay updated with the latest news.

Next