Advertisement

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

11:39 AM Sep 29, 2023 | Team Udayavani |

ಹೋಶಿಯಾರ್ಪುರ: ಶಿರೋಮಣಿ ಅಕಾಲಿ ದಳ ಪಕ್ಷದ ನಾಯಕ ಸುರ್ಜಿತ್ ಸಿಂಗ್ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಸುರ್ಜಿತ್ ಸಿಂಗ್ ಅವರು ಕಿರಾಣಿ ಅಂಗಡಿಯೊಂದರ ಹೊರಗೆ ಕುಳಿತಿದ್ದಾಗ ಈ ಘಟನೆ ನಡೆದಿದೆ.

Advertisement

“ರಾತ್ರಿ 7 ಗಂಟೆಯ ಸುಮಾರಿಗೆ ಸುರ್ಜಿತ್ ಸಿಂಗ್ ಅವರು ತಮ್ಮ ಪ್ರದೇಶದಲ್ಲಿ ದಿನಸಿ ಅಂಗಡಿಯೊಂದರ ಹೊರಗೆ ಕುಳಿತಿದ್ದರು. ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಬಂದು ಸುರ್ಜಿತ್ ಸಿಂಗ್ ಕಡೆಗೆ ನಾಲ್ಕು ಸುತ್ತು ಗುಂಡು ಹಾರಿಸಿದರು. ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ತಲ್ವಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

ಶಿರೋಮಣಿ ಅಕಾಲಿ ದಳ ನಾಯಕ ಸುರ್ಜಿತ್ ಸಿಂಗ್ ಅವರು ಮೆಗೋವಾಲ್ ಗಂಜಿಯಾನ್ ಗ್ರಾಮದ ಮಾಜಿ ಸರಪಂಚ್ ಆಗಿದ್ದು, ಪ್ರಸ್ತುತ ಅವರ ಪತ್ನಿ ಅದೇ ಹುದ್ದೆಯಲ್ಲಿದ್ದಾರೆ. ಹತ್ಯೆಯ ಹಿಂದಿನ ಕಾರಣ ತಿಳಿದುಬಂದಿಲ್ಲ ಮತ್ತು ಅಪರಿಚಿತ ದುಷ್ಕರ್ಮಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next