Advertisement
ಹಂಪಿ ಗಜಶಾಲೆ ಮಂಟಪದ ಆವರಣದಲ್ಲಿ ಆಯೋಜಿಸಲಾಗಿರುವ ವಿಜಯನಗರ ವೈಭವ ಧ್ವನಿ ಮತ್ತು ಬೆಳಕು ರೂಪಕ ಪ್ರೀಮಿಯರ್ ಶೋ ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಲೆ, ಶ್ರೀಮಂತಿಕೆ, ತಾಂತ್ರಿಕತೆಯನ್ನು ಇಂದಿನ ಪೀಳಿಗೆಗೆ ತಿಳಿಸಿಕೊಡಬೇಕು ಎಂಬ ಸದುದ್ದೇಶದಿಂದ ಹಂಪಿ ಉತ್ಸವ ಆಚರಿಸಲಾಗುತ್ತಿದೆ ಎಂದರು. ಸಿಎಎ ಕುರಿತು ವಾಸ್ತವತೆ ತಿಳಿಸಿಕೊಡುವ ಕೆಲಸವಾಗಬೇಕಿದೆ. ಇದು ಯಾರದೋ ಪೌರತ್ವ ಕಿತ್ತುಕೊಳ್ಳುವ ಕಾಯ್ದೆಯಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಸಂವಿಧನಾತ್ಮಕವಾಗಿ ಆಶ್ರಯ ಕೋರಿ ಬಂದವರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ. ಇದರಿಂದ ದೇಶದ ಮುಸ್ಲಿಂ ಬಾಂಧವರು ಭಯಪಡುವ ಅವಶ್ಯಕತೆ ಇಲ್ಲ ಎಂದರು.
Related Articles
3ರಿಂದ 4 ಸಾವಿರ ಜನರಿಗೆ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜ.10ರಿಂದ 16ರವರೆಗೆ ಸಂಜೆ 7ರಿಂದ 9:30ರವರೆಗೆ ನಡೆಯಲಿದೆ. ಜನರು ಬಂದು ವೀಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.
Advertisement
ಡ್ಯಾನ್ಸ್ ಕೋರಿಯಾಗ್ರಾಫರ್ ಡಾ| ಶೀಲಾ ಶ್ರೀಧರ್ ಮಾತನಾಡಿ, ಇದು 8ನೇ ಧ್ವನಿ ಮತ್ತು ಬೆಳಕು ರೂಪಕಕ್ಕೆ ಡ್ಯಾನ್ಸ್ ಕೊರಿಯಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದೇನೆ. ಹೊಸಪೇಟೆ ಮಕ್ಕಳೇ ಶೇ.90ರಷ್ಟು ಇದ್ದಾರೆ. ಉಳಿದವರು ನುರಿತ ಕಲಾವಿದರಿದ್ದಾರೆ. ಸ್ಥಳೀಯ ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸುವುದಕ್ಕೆ ಒಳ್ಳೆಯ ಅವಕಾಶ. ವಿಜಯನಗರ ಸಾಮ್ರಾಜ್ಯದ ಪ್ರದೇಶದಲ್ಲಿಯೇ ಈ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿರುವುದು ಸಂತಸದ ತಂದಿದೆ. ಎಲ್ಲರ ಸಹಕಾರದೊಂದಿಗೆ ಪ್ರದರ್ಶನ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಶಾಸಕ ಆನಂದಸಿಂಗ್, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.