Advertisement

ಚಿಕ್ಕಮಗಳೂರು : ಕೋವಿಡ್ ನಿಂದ ಮೃತ ಪಟ್ಟ ವ್ಯಕ್ತಿಯ ವರದಿಯನ್ನು ನೆಗೆಟಿವ್ ಕೊಟ್ಟ ಆಸ್ಪತ್ರೆ 

01:45 PM May 17, 2021 | Team Udayavani |

ಚಿಕ್ಕಮಗಳೂರು : ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಬೇರೆ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವರದಿ ನೀಡಿ ಎಡವಟ್ಟು ಮಾಡಿದ್ದಾರೆ.

Advertisement

ಚಿಕ್ಕಮಗಳೂರು ತಾಲೂಕಿನ ಇಂದಿರಾನಗರ ಬಡಾವಣೆಯ ವ್ಯಕ್ತಿಯೊಬ್ಬ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿಯು ಸಾವನ್ನಪ್ಪಿದ್ದಾರೆ.  ಖಾಸಗಿ ಆಸ್ಪತ್ರೆಯವರು ವಿವಿಧ ಖಾಯಿಲೆಯಿಂದ ವ್ಯಕ್ತಿಯು ಬಳಲಿ ಸಾವನಪ್ಪಿದ್ದಾರೆಂದು ಮೃತದೇಹ ಹಸ್ತಾಂತರಿಸಿದ್ದರು.

ವಿಚಿತ್ರ ಎಂದರೆ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿ ಬಂದ ನಂತರ ಪಾಸಿಟಿವ್ ವರದಿಯು ಬಂದಿದೆ. ಈ ಕಾರಣದಿಂದ ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿದ್ದ ನೂರಾರು ಜನ ಆತಂಕದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಇನ್ನು ಒಂದೇ ಹಳ್ಳಿಯಲ್ಲಿ 128 ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಸ್ಥಳಕ್ಕೆ ಎಸಿ, ತಹಶೀಲ್ದಾರ್, ಇಓ. ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next