Advertisement

ಫ್ಯಾನ್‌ನಲ್ಲಿ ಆತ್ಮಹತ್ಯೆ ನಿಗ್ರಹ ಸಾಧನ ಅಳವಡಿಸದ್ದಕ್ಕೆ ಹಾಸ್ಟೆಲ್‌ಗೆ ಬೀಗ

07:44 AM Feb 04, 2024 | Team Udayavani |

ಜೈಪುರ: ರಾಜಸ್ಥಾನದ ಕೋಟಾದ ಹಾಸ್ಟೆಲ್‌ವೊಂದರಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಹಾಸ್ಟೆಲ್‌ನ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ನಿಗ್ರಹ ಸಾಧನಗಳನ್ನು ಅಳವಡಿಸಿಲ್ಲವೆಂದು ಜಿಲ್ಲಾಧಿಕಾರಿಗಳು ಹಾಸ್ಟೆಲ್‌ಗೆ ಬೀಗ ಜಡಿದಿದ್ದಾರೆ.

Advertisement

ಕಾಂಚನ್‌ ರೆಸಿಡೆನ್ಸಿ ಹಾಸ್ಟೆಲ್‌ನಲ್ಲಿ ತಂಗಿದ್ದ ವಿದ್ಯಾರ್ಥಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದ. ತನಿಖೆ ವೇಳೆ ಹಾಸ್ಟೆಲ್‌ನ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ನಿಗ್ರಹ ಸಾಧನಗಳು ಅಳವಡಿಕೆಯಾಗದೇ ಇರುವುದು ಕಂಡುಬಂದಿದೆ. ಹೀಗಾಗಿ ಜಿಲ್ಲಾಡಳಿತ ಹಾಸ್ಟೆಲ್‌ ವಿರುದ್ಧ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗಿರುವ ಕಾರಣ, ಫ್ಯಾನ್‌ಗಳಲ್ಲಿ ಈ ಸಾಧನಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಈ ಹಿಂದೆಯೇ ಸೂಚಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next