Advertisement

ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇನ್ನಿಲ್ಲ

09:37 AM Jan 08, 2020 | Hari Prasad |

ಶಿರಸಿ: ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇಂದು ಮಧ್ಯಾಹ್ನ 2.45ಕ್ಕೆ ನಿಧನ ಹೊಂದಿದರು. ಅವರು ಕಳೆದ ಒಂದು ತಿಂಗಳುಗಳಿಂದ ಸೋಂದಾ – ಹಳೆಯೂರಿನಲ್ಲಿರುವ ಶ್ರೀಪಾದ ಜೋಶಿ ಬಾಡಲಕೊಪ್ಪ ಅವರ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು. ಅವರಿಗೆ 80 ವರ್ಷ ಪ್ರಾಯವಾಗಿತ್ತು.

Advertisement

ಮಂಜುನಾಥ ಭಾಗವತರ ಪಾರ್ಥಿವ ಶರೀರವನ್ನು ಸಂಜೆ 5.30 ಕ್ಕೆ ಶಿರಸಿ ನಗರದ ಹೊಟೇಲ್ ಸಾಮ್ರಾಟ್ ಎದುರುಗಡೆ ಇರುವ ಸದ್ಗತಿ – ವಿದ್ಯಾನಗರ ರುದ್ರಭೂಮಿಗೆ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಶಿಷ್ಯರು ಹಾಗೂ ಅಭಿಮಾನಿಗಳು ಸದ್ಗತಿಗೆ ಆಗಮಿಸಬೇಕಾಗಿ ಯಕ್ಷಶಾಲ್ಮಲಾದ ಅಧ್ಯಕ್ಷ ಆರ್.ಎಸ್.ಹೆಗಡೆ ಭೈರುಂಬೆ ಅವರು ವಿನಂತಿ ಮಾಡಿಕೊಂಡಿದ್ದಾರೆ. ಸಾರ್ವಜನಿಕ ದರ್ಶನದ ಬಳಿಕ ಅವರ ಅಂತ್ಯಕ್ರಿಯೆಯನ್ನು ‘ಸದ್ಗತಿ’ ರುದ್ರಭೂಮಿಯಲ್ಲಿ ರಾತ್ರಿ ನೆರವೇರಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next