Advertisement
ಕಿತ್ತೂರು ಚನ್ನಮ್ಮ ವೃತ್ತ ಹಾಗೂ ಸುತ್ತಲಿನ ಪ್ರಮುಖ ಸ್ಥಳಗಳಲ್ಲಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಹಳೇ ಬಸ್ ನಿಲ್ದಾಣದಿಂದ ಸಂಚರಿಸುವ ಎಕ್ಸ್ಪ್ರೆಸ್ ಬಸ್ಗಳ ಸ್ಥಳಾಂತರ ಅನಿವಾರ್ಯವಾಗಿದೆ. ಇದರ ನಡುವೆ ಬಿಆರ್ಟಿಎಸ್ ಪ್ರಾಯೋಗಿಕ ಕಾರ್ಯಾಚರಣೆಗೆ ಬಸ್ಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಪೂರಕವಾಗಿ ಹು-ಧಾ ನಡುವೆ ಸಂಚರಿಸುತ್ತಿರುವ ವಾಯವ್ಯ ಸಾರಿಗೆ ಸಂಸ್ಥೆಗಳ ಬಸ್ಗಳೂ ಕಡಿಮೆಯಾಗುತ್ತಿಲ್ಲ. ಸ್ಥಳಾಂತರಕ್ಕೆ ಪೂರಕವಾಗಿ ಪ್ರಯಾಣಿಕರಿಗೆ ಬೇಕಾದ ಸೌಲಭ್ಯಗಳನ್ನು ಹೊಸೂರು ಪ್ರಾದೇಶಿಕ ಟರ್ಮಿನಲ್ಗೆ ಕಲ್ಪಿಸದಿರುವುದು ಈ ನಿಲ್ದಾಣದಿಂದ ಬಸ್ ಸಂಚರಿಸುವುದು ಸದ್ಯಕ್ಕೆ ಅನುಮಾನವಾಗಿದೆ.
Related Articles
Advertisement
ಲಾಭ-ನಷ್ಟದ ಲೆಕ್ಕಾಚಾರಹಳೇ ಬಸ್ ನಿಲ್ದಾಣದಿಂದ ನಿತ್ಯ ಸಾರಿಗೆ ಸಂಸ್ಥೆಯ 3000ಕ್ಕೂ ಹೆಚ್ಚು ಅನುಸೂಚಿಗಳು ಹಾಗೂ ಬಿಆರ್ಟಿಎಸ್ನಿಂದ 250 ಟ್ರಿಪ್ಗಳು ಆಗುತ್ತಿವೆ. ಬಿಆರ್ಟಿಎಸ್ಗೆ ಮೊದಲ ಆದ್ಯತೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಸಂಚಾರ ನಿರ್ವಹಣೆ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದು, ಹಳೇ ಬಸ್ ನಿಲ್ದಾಣದಿಂದ ಎಕ್ಸ್ಪ್ರೆಸ್ಗಳನ್ನು ಸ್ಥಳಾಂತರಿಸುವಂತೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಆದರೆ ಏಕಾಏಕಿ ಸ್ಥಳಾಂತರಿಸುವುದರಿಂದ ಸಂಸ್ಥೆಯ ಆದಾಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಖಾಸಗಿಯವರಿಗೆ ನೇರವಾಗಿಅನುಕೂಲ ಮಾಡಿಕೊಟ್ಟಂತಾಗುತ್ತಿದೆ ಎನ್ನುವ ಲಾಭ-ನಷ್ಟದ ಲೆಕ್ಕಾಚಾರ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳದ್ದಾಗಿದೆ. ಇಷ್ಟೆಲ್ಲಾ ಸಮಸ್ಯೆ, ತಾಂತ್ರಿಕ ತೊಂದರೆ, ಲಾಭ-ನಷ್ಟಗಳನ್ನು ಅರಿತಿರುವ ಅಧಿಕಾರಿಗಳು ಎಲ್ಲದಕ್ಕೂ ಪರಿಹಾರ ಕಂಡುಕೊಂಡು ಹಂತಹಂತವಾಗಿ ಹೊಸೂರು ಟರ್ಮಿನಲ್ಗೆ ಬಸ್ಗಳನ್ನು ಸ್ಥಳಾಂತರಿಸಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ಹಳೇ ಹೆಂಡತಿ ಪಾದವೇ ಗತಿ ಎನ್ನುವಂತೆ ಸದ್ಯದ ಪರಿಸ್ಥಿತಿಯಲ್ಲಿ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣ ಅನಿವಾರ್ಯವಾಗಿದೆ. ಹೊಸೂರು ಟರ್ಮಿನಲ್ ನೋಡಲು ಬೃಹದಾಕಾರವಾಗಿದ್ದು, 23 ಪ್ಲಾಟ್ಫಾರ್ಮ್ ಹೊಂದಿದೆ. ಬಸ್ಗಳನ್ನು ಪ್ಲಾಟ್ಫಾರ್ಮ್ ಹೊಂದಿಕೊಂಡು ಉದ್ದವಾಗಿ ನಿಲ್ಲುವ ವ್ಯವಸ್ಥೆ ಇರುವುದರಿಂದ ಹೆಚ್ಚುವರಿಯಾಗಿ ಅಕ್ಕಪಕ್ಕದಲ್ಲಿ ಬಸ್ ನಿಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ 1000 ಅನುಸೂಚಿಗಳಿಗೆ ಪೂರಕವಾಗಿಲ್ಲ ಎನ್ನುವ ಅಸಮಾಧಾನವಿದೆ. ಒಂದೇ ಮಾರ್ಗದಲ್ಲಿ ಏಕಕಾಲಕ್ಕೆ ಹೊರಡುವ ಬಸ್ಗಳನ್ನು ನಿಲ್ಲಿಸಲು ಸ್ಥಳಾವಕಾಶ ಇಲ್ಲದಂತಾಗಿದೆ. ಈ ಕುರಿತು ಸಾರಿಗೆ ಸಂಸ್ಥೆ ಅಧಿಕಾರಿಗಳ ಸಲಹೆ ಪಡೆಯದಿರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ ಎನ್ನುತ್ತಿದ್ದಾರೆ ಸಾರಿಗೆ ಅಧಿಕಾರಿಗಳು. ಹೀಗಾಗಿ ಗೋಕುಲ ಹೊಸ ಬಸ್ ನಿಲ್ದಾಣಕ್ಕೆ 319 ಅನುಸೂಚಿಗಳನ್ನು ವರ್ಗಾಯಿಸಿದ್ದು, ನಗರವೊಂದು 3 ಬಸ್ ನಿಲ್ದಾಣವಾಗಿವೆ. ವಾಯವ್ಯ ಸಾರಿಗೆ ಸಂಸ್ಥೆಯ ಆದಾಯ ಹಾಗೂ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಿದೆ. ರಸ್ತೆ, ಜಂಕ್ಷನ್, ಟರ್ಮಿನಲ್ನಲ್ಲಿ ಸೌಲಭ್ಯ ಕಲ್ಪಿಸಿ ಹಂತ ಹಂತವಾಗಿ ಬಸ್ಗಳನ್ನು ಸ್ಥಳಾಂತರ ಮಾಡುತ್ತೇವೆ. ಪ್ರಯಾಣಿಕರ ಮೂಲ ಸೌಲಭ್ಯ ನೀಡದ ಹೊರತು ಸ್ಥಳಾಂತರ ಮಾಡಲ್ಲ.
ರಾಜೇಂದ್ರ ಚೋಳನ್,
ಎಂಡಿ, ವಾಯವ್ಯ ಸಾರಿಗೆ ಸಂಸ್ಥೆ ಬಿಆರ್ಟಿಎಸ್ ಬಸ್ಗಳ ಸಂಖ್ಯೆ ಹೆಚ್ಚಿಸಿದಂತೆ ಹು-ಧಾ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆ ಬಸ್ಗಳ ಸಂಖ್ಯೆ ಕಡಿಮೆ ಮಾಡಬೇಕು. ಹಳೇ ಬಸ್ ನಿಲ್ದಾಣಕ್ಕೆ ಬರುವ ಎಕ್ಸ್ಪ್ರೆಸ್ ಬಸ್ಗಳನ್ನು ಸ್ಥಳಾಂತರಿಸಿದರೆ ಮಾತ್ರ ಕಿತ್ತೂರು ಚನ್ನಮ್ಮ ವೃತ್ತ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲು ಸಾಧ್ಯ.
ಬಿ.ಎಸ್.ನೇಮಗೌಡ, ಡಿಸಿಪಿ ಹೇಮರಡ್ಡಿ ಸೈದಾಪುರ