Advertisement

ಭಾರಿ ಮಳೆಗೆ ಕುಸಿದು ಬಿತ್ತು ಹೊಸೂರು ಸೇತುವೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

03:33 PM Sep 27, 2020 | sudhir |

ರಾಯಚೂರು : ಸಿರವಾರ ತಾಲೂಕಿನ ಎನ್.ಹೊಸೂರು ಸೇತುವೆಯು ಭಾನುವಾರ ಬೆಳಗ್ಗೆ ಮಳೆಯಿಂದ ಕುಸಿದಿದೆ‌.

Advertisement

ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಸುತ್ತ-ಮುತ್ತಲಿನ ಅನೇಕ ಹಳ್ಳಗಳು ತುಂಬಿ ಹರಿಯುತ್ತಿದ್ದು ನುಗುಡೋಣಿ‌ ಮಾರ್ಗವಾಗಿ ಎನ್.ಹೊಸೂರು ಗ್ರಾಮಕ್ಕೆ ತೆರಳುವ ಮಧ್ಯದಲ್ಲಿ ಬರುವ ಸೇತುವೆಯು ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಕುಸಿದಿದೆ‌.

ಸದ್ಯಕ್ಕೆ ಬೇರೆ ಕಾಲುವೆ ಪಕ್ಕದ ರಸ್ತೆಯ ಮೂಲಕ ವಾಹನಗಳು ಸಂಚರಿಸುತ್ತಿದ್ದು , ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಭಾರಿ ಮಳೆಗೆ ಸುತ್ತ ಮುತ್ತಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ರೈತರು ಬೆಳೆದ ಬೆಳೆಗಳು ಪ್ರವಾಹದ ನೀರಿನಿಂದ ಕೊಚ್ಚಿ ಹೋಗಿದ್ದು ಇದರಿಂದ ರೈತರಿಗೆ ಸಾಕಷ್ಟು ನಷ್ಟ ಸಂಭವಿಸಿದೆ.

ಇದನ್ನೂ ಓದಿ:ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುವ ಮುಂಡಗೋಡು ಟಿಬೇಟಿಯನ್ ಕ್ಯಾಂಪ್ ಎಂಬ ಅದ್ಭುತ ತಾಣ !

Advertisement

ಮಳೆಯ ಹೊಡೆತಕ್ಕೆ ಕೆಲವೊಂದು ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದಿದ್ದು ಅಪಾರ ಹಾನಿ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next