Advertisement

ರಾಜ್ಯದಲ್ಲಿ ಕೋವಿಡ್ ಲಸಿಕೆ ಕೊರತೆಯಿಲ್ಲ: ಸಚಿವ ಸುಧಾಕರ್

08:33 AM Mar 25, 2021 | Team Udayavani |

ಬೆಂಗಳೂರು: ರಾಜಕ್ಕೆ 4 ಲಕ್ಷ ಡೋಸ್ ಕೋವಿಡ್ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಿನ್ನೆ ತಡರಾತ್ರಿ ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ಕಂಟೈನರ್- ಬಸ್ ಮುಖಾಮುಖಿ: ಹೊತ್ತಿ ಉರಿದ ಬಸ್, ಕಂಟೈನರ್ ಚಾಲಕ ಸಜೀವ ದಹನ

ದೇಶದಲ್ಲಿ ಸದ್ಯ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿದೆ. ಆದರೆ ಎಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದಾಗಿದೆ.

ಇದನ್ನೂ ಓದಿ:ಕೊವಿಶೀಲ್ಡ್‌ ಸುರಕ್ಷಿತ; ಹಿಂಜರಿಕೆ ಬೇಡ : ಕೇಂದ್ರ ಸರಕಾರ ಸ್ಪಷ್ಟನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next