Advertisement

Home burglary: ಮಂಗಳೂರಿನ ಜೈಲಿನಲ್ಲಿದ್ದ ಆರೋಪಿಗಳು ಪೊಲೀಸರ ವಶಕ್ಕೆ

10:10 PM Jul 20, 2024 | Team Udayavani |

ಕುಂಬಳೆ: ಕಳವು ಪ್ರಕರಣದಲ್ಲಿ ಬಂಧಿತರಾಗಿ ಮಂಗಳೂರು ಜೈಲಿನಲ್ಲಿರುವ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಮಂಜೇಶ್ವರ ನಿವಾಸಿ ಮೊಹಮ್ಮದ್‌ ಶಿಹಾಬ್‌(30), ಮಂಗಳೂರು ಗಂಜೀಮಠ ನಿವಾಸಿಗಳಾದ ಮೊಹಮ್ಮದ್‌ ಸಫಾÌನ್‌ (20) ಹಾಗೂ ಮೊಹಮ್ಮದ್‌ ಅರ್ಫಾಸ್‌(19)ನನ್ನು ಕುಂಬಳೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸೋಂಕಾಲ್‌ ಸುಭಾಶ್‌ ನಗರದ ಆಯಿಶಾ ಯೂಸಫ್‌ ಅವರ ಮನೆಯಿಂದ 2024 ಜೂ. 4ರಂದು 1.20 ಲಕ್ಷ ರೂ.ಮೌಲ್ಯದ ಐಫೋನ್‌ ಹಾಗೂ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಇವರ ವಿಚಾರಣೆಗೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಬಂದ್ಯೋಡು ಅಡ್ಕದ ಅಶ್ರಫ್‌ ಅಲಿ(25)ಯನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು. ಪೊಲೀಸ್‌ ವಶದಲ್ಲಿರುವ ಆರೋಪಿಗಳು ಮಂಜೇಶ್ವರ, ಕಾಸರಗೋಡು ಹಾಗೂ ಕರ್ನಾಟಕದ ವಿವಿಧೆಡೆ ನಡೆದ ಕಳವು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next