Advertisement

Davanagere: ಭಾರೀ ಮಳೆಗೆ ಕುಸಿದು ಬಿದ್ದ ಮನೆ… ಮೂವರು ಕೂಲಿ ಕಾರ್ಮಿಕರಿಗೆ ಗಾಯ

05:12 PM Aug 21, 2024 | Team Udayavani |

ದಾವಣಗೆರೆ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಮನೆ ಬಿದ್ದು ಉತ್ತರ ಪ್ರದೇಶ ಮೂಲದ ಮೂವರು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೋಡಿಹಳ್ಳಿ ಕ್ಯಾಂಪ್‌ನಲ್ಲಿ ಸಂಭವಿಸಿದೆ.

Advertisement

ಉತ್ತರ ಪ್ರದೇಶ ಮೂಲದ ಸುಕುಮಾರ್, ಕೃಷ್ಣ, ಮಂಜಿತ್ ಗಾಯಗೊಂಡವರು. ಮೂವರು ಕೂಲಿ ಕಾರ್ಮಿಕರು ಭತ್ತದ ನಾಟಿ ಕೆಲಸಕ್ಕೆ ಕೋಡಿಹಳ್ಳಿ ಕ್ಯಾಂಪ್‌ಗೆ ಆಗಮಿಸಿದ್ದು, ಬಾಡಿಗೆ ಮನೆಯೊಂದರಲ್ಲಿ ಇದ್ದರು. ಧಾರಾಕಾರವಾಗಿ ಸುರಿದ ಮಳೆಯಿಂದ ಮನೆ ಬಿದ್ದು ಮೂವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ದಾವಣಗೆರೆಯ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆ ಬಿದ್ದು ಉತ್ತರ ಪ್ರದೇಶದ ಮೂಲದ ಸುಕುಮಾರ್, ಕೃಷ್ಣ, ಮಂಜಿತ್ ಗಾಯಗೊಂಡಿರುವ ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಇದನ್ನೂ ಓದಿ: Shivamogga: ಬೇಕರಿಯಲ್ಲಿ ಅಗ್ನಿ ಅವಘಡ… ಸ್ಫೋಟಗೊಂಡ ಸಿಲಿಂಡರ್, ದಿಕ್ಕಾಪಾಲಾಗಿ ಓಡಿದ ಜನ

Advertisement

Udayavani is now on Telegram. Click here to join our channel and stay updated with the latest news.

Next