Advertisement

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

10:08 AM May 17, 2024 | Team Udayavani |

ದಾವಣಗೆರೆ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಕೊಲೆ‌ ಮಾಡಿದ್ದ ಆರೋಪಿಯು ಮತ್ತೋರ್ವ ಮಹಿಳೆಗೆ ಚಾಕು ಇರಿದ ಘಟನೆ ಬೆಳಕಿದೆ ಬಂದಿದೆ. ಈ ಬಗ್ಗೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಇನ್ನೊಂದು ಎಫ್ ಐಆರ್ ದಾಖಲಾಗಿದೆ.

Advertisement

ಅಂಜಲಿ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಗಿರೀಶ ಸಾವಂತ ಬೆಂಗಳೂರಿನಿಂದ ದಾವಣಗೆರೆಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ರೈಲಿನಲ್ಲಿ ಬಾತ್ ರೂಂ ಗೆ ಹೋಗಿದ್ದ ಮಹಿಳೆಯೊಂದಿಗೆ ಕಿರಿಕ್ ಮಾಡಿದ ಗಿರೀಶ ಸಾವಂತ ಮಹಿಳೆಗೆ ಚಾಕು ಹಾಕಲು ಯತ್ನಿಸಿದ್ದ.

ಈ ವೇಳೆ ಮಹಿಳೆ ಕೈಗೆ ಚಾಕುವಿಂದ ಗಾಯವಾಗಿದೆ. ಘಟನೆ ಕಂಡು ಮಹಿಳೆಯ ಪತಿ ಹಾಗೂ ಸಂಬಂಧಿಕರು ಆರೋಪಿ‌ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಾಯಕೊಂಡ ಸಮೀಪ ಆರೋಪಿಗೆ ಅಂಬುಲೆನ್ಸ್ ನಲ್ಲಿ ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ತಡರಾತ್ರಿಯೇ ಹುಬ್ಬಳ್ಳಿಗೆ ಪೊಲೀಸರು ಕರೆದೊಯ್ದಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಮಹಿಳೆ ಕೂಡ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಸ್ವಗ್ರಾಮಕ್ಕೆ ವಾಪಸಾಗಿದ್ದಾರೆ.

Advertisement

ಪ್ರಜ್ಞಾಹೀನ ಸ್ಥಿತಿಯಲ್ಲಿ ಆರೋಪಿ:

ಆರೋಪಿಯ ಬಗ್ಗೆ ಮಾಹಿತಿ ನೀಡಿದ ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಪತ್ತೆಗಾಗಿ ಎಂಟು ತಂಡ ರಚಿಸಲಾಗಿತ್ತು. ಗುರುವಾರ ರೈಲ್ವೆ ಪೋಲಿಸರ ಸಹಾಯದಿಂದ ಆರೋಪಿ ಸಿಕ್ಕಿದ್ದಾನೆ. ಆತನ ತಲೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ಮಾತನಾಡುವ ಸ್ಥಿತಿಯಲ್ಲಿಲ್ಲ. ಗಿರೀಶನ ಮೇಲೆ ಬೈಕ್ ಕಳ್ಳತನ ವಿಚಾರದಲ್ಲಿ ನಾಲ್ಕು ಪ್ರಕಾರಣಗಳು ದಾಖಲಾಗಿವೆ. ಈತ ಎಂಒಬಿ ಆಗಿದ್ದ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next