Advertisement

Lok Sabha ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ: ಪ್ರತಾಪ ಸಿಂಹ

12:37 AM Mar 12, 2024 | Team Udayavani |

ಮೈಸೂರು: ಕಾಂಗ್ರೆಸ್‌ನಲ್ಲಿ ಸೋಲಿನ ಟಿಕೆಟ್‌ಗಾಗಿಯೇ ಹೊಡೆದಾಟವಿದೆ. ಹೀಗಿರು ವಾಗ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನ ಪಡುತ್ತ ಇರುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

Advertisement

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು- ಮನಮದುರೈ ನೂತನ ರೈಲಿಗೆ ಚಾಲನೆ ನೀಡಿ ಈ ಬಾರಿ ಟಿಕೆಟ್‌ ಕೈತಪ್ಪುವ ಸುದ್ದಿ ಹರಿದಾಡುತ್ತಿ ರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಅಂದರೆ ಆಕಾಂಕ್ಷಿಗಳು ಇದ್ದೇ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ.

ಹಾಗಾಗಿ ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನಿಸುತ್ತಾರೆ. ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿ ಆಶೀರ್ವಾದ ಇದೆ. ನಾನು ಈ ಹತ್ತು ವರ್ಷದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹಾಗಾಗಿ ಪಕ್ಷ ನನ್ನ ಕೈ ಬಿಡಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿಯವರಿಲ್ಲದೆ ಪ್ರತಾಪ್‌ ಸಿಂಹ ಶೂನ್ಯ. ಮೋದಿ ಹೆಸರಿನಲ್ಲಿ ನಾನು 2 ಬಾರಿ ಗೆದ್ದಿರುವೆ. ಮೋದಿ ಅವರು ನನ್ನ ಹಾಗೂ ಪಕ್ಷದ ಪಾಲಿಗೆ ದೇವರಿದ್ದಂತೆ. ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಗೆಲ್ಲುತ್ತೇನೆ. ಜತೆಗೆ ಪಕ್ಷದ ವಿಶ್ವಾಸ ನನ್ನ ಮೇಲಿದೆ. ನನಗೆಮತ್ತೊಂದು ಅವಕಾಶ ಸಿಗುತ್ತದೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next