Advertisement

ಹೌದೋ ಹುಲಿಯಾ…ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ; ಈತನೇ ನಿಜವಾದ ಹುಲಿಯಾ!

09:51 AM Dec 17, 2019 | Nagendra Trasi |

ಬೆಂಗಳೂರು: ರಾಜ್ಯದ ಉಪಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಗವಾಡದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಹೌದೋ ಹುಲಿಯಾ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಜನಪ್ರಿಯತೆ ಪಡೆದಿದ್ದ ಪೀರಪ್ಪ ಕಟ್ಟೀಮನೆ ಸೋಮವಾರ ಖುದ್ದು ಬೆಂಗಳೂರಿಗೆ ಆಗಮಿಸಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಘಟನೆ ನಡೆದಿದೆ.

Advertisement

ಹೌದೋ ಹುಲಿಯಾ ಎಂದು ಕೂಗಿದ್ದ ಪೀರಪ್ಪ ಕಟ್ಟೀಮನಿ ಭೇಟಿಯಾದ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಗವಾಡದಲ್ಲಿ ನನ್ನ ಭಾಷಣದ ವೇಳೆ “ಹೌದೋ ಹುಲಿಯಾ” ಅಂತ ಅವನದ್ದೇ ಶೈಲಿಯಲ್ಲಿ ಪ್ರೀತಿಯಿಂದ ಕೂಗಿದ್ದ ಈ ಪೀರಪ್ಪ ಕಟ್ಟೀಮನಿ. ಅಷ್ಟೇ ಪ್ರೀತಿಯಿಂದ ಇಂದು ನನ್ನ ಆರೋಗ್ಯ ವಿಚಾರಿಸಲು ಬಂದಿದ್ದಾನೆ. ಇಂಥ ನಿಷ್ಕಲ್ಮಶ ಪ್ರೀತಿ ತುಂಬಿದ ಹೃದಯದ ಈತನೇ ನಿಜವಾದ ಹುಲಿಯಾ ಎಂದು ಶ್ಲಾಘಿಸಿದ್ದಾರೆ.

ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಹೃದಯ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಪ್ರಚಾರ ವೇಳೆ ಹೌದೋ ಹುಲಿಯಾ ಎಂದು ಕೂಗಿ ಜನಪ್ರಿಯತೆ ಪಡೆದಿದ್ದ ಪೀರಪ್ಪ ಖುದ್ದು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮೂಲಕ ಸುದ್ದಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next