Advertisement
ಕಾರ್ಮಿಕರು ಹಾಗೂ ಬಡವರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಸ್ವಾಗತಿಸುತ್ತೇವೆ. ಆದರೆ, ಇದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಬೇಕಾಗಿತ್ತು. ಮಹಾನಗರ ಪಾಲಿಕೆ ಹೊರತುಪಡಿಸಿ ಇತರೆಡೆಗಿನ ಕ್ಯಾಂಟೀನ್ಗಳ ಆಹಾರ ಪೂರೈಕೆ ವೆಚ್ಚದಲ್ಲಿ ಶೇ. 30ನ್ನು ಕಾರ್ಮಿಕ ಇಲಾಖೆ ಹಾಗೂ ಶೇ.70ನ್ನು ನಗರಾಭಿವೃದ್ಧಿ ಇಲಾಖೆಯಿಂದ ಪಾವತಿ ಮಾಡಲಾಗುತ್ತದೆ. ಆದರೆ ಮಹಾನಗರ ಪಾಲಿಕೆಗಳಿಗೆ ಮಾತ್ರ ಬೇರೆ ನಿಯಮ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Related Articles
ಅನುದಾನ ಹೊರೆಯಿಂದ ಉಳಿದ ಭಾಗದಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ವಿನಾಕಾರಣ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಇಂದಿರಾ ಕ್ಯಾಂಟೀನ್ ಆರಂಭಿಸಲು ವಿರೋಧ ಮಾಡುತ್ತಿದ್ದಾರೆ ಎಂದು ಬಿಂಬಿಸುತ್ತಿದ್ದಾರೆ. ಅಧಿಕಾರಿಗಳು ಕ್ಯಾಂಟೀನ್ ಆರಂಭಕ್ಕೆ ತಯಾರಿ ಮಾಡಿಕೊಂಡರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲು ಜಗದೀಶ ಶೆಟ್ಟರ ಸಿದ್ಧರಿದ್ದಾರೆ. ಸರಕಾರವೇ ಸಂಪೂರ್ಣ ವೆಚ್ಚ ಭರಿಸಿದರೆ ಮಹಾನಗರದಲ್ಲಿ ಸಿದ್ಧಗೊಂಡಿರುವ ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಲಿವೆ ಎಂದು ವೀರಣ್ಣ ಸವಡಿ ತಿಳಿಸಿದರು.
Advertisement
ಬಿಲ್ ಪಾವತಿ ಮಾಡಲ್ಲಆರಂಭವಾಗಿರುವ ಇಂದಿರಾ ಕ್ಯಾಂಟೀನ್ಗಳ ಗುತ್ತಿಗೆದಾರರು ಕಳೆದ ತಿಂಗಳ ಬಿಲ್ ಕಳುಹಿಸಿದ್ದು, ಯಾವುದೇ ಕಾರಣಕ್ಕೂ ಪಾಲಿಕೆಯಿಂದ ಬಿಲ್ ನೀಡುವುದಿಲ್ಲ. ಇದಕ್ಕೆ ತಗಲುವ ವೆಚ್ಚ ಸರಕಾರವೇ ಭರಿಸಬೇಕು ಎನ್ನುವುದರ ಕುರಿತು ಮುಂದಿನ ಸಾಮಾನ್ಯ ಸಭೆಯಲ್ಲಿ ನಿರ್ಣಯ ತಗೆದುಕೊಂಡು ಸರಕಾರಕ್ಕೆ ಕಳುಹಿಸುತ್ತೇವೆ. ಕೂಡಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಕೆ ಧುರೀಣರು ಸರಕಾರದ ಮೇಲೆ ಒತ್ತಡ ಹೇರಿ ಸರಕಾರದಿಂದಲೇ ಸಂಪೂರ್ಣ ವೆಚ್ಚ ಭರಿಸುವಂತೆ ಮಾಡಬೇಕು.
. ವೀರಣ್ಣ ಸವಡಿ,
ಪಾಲಿಕೆ ಬಿಜೆಪಿ ಸದಸ್ಯ