Advertisement

Hubli: ಜಮೀರ್‌ ಅಹ್ಮದ್‌ ವಿರುದ್ದ ಬಿಜೆಪಿ ಎಸ್ಸಿ ಮೋರ್ಚಾ ದೂರು

09:16 PM Aug 20, 2024 | Team Udayavani |

ಹುಬ್ಬಳ್ಳಿ: ಸಚಿವ ಜಮೀರ್ ಅಹ್ಮದ್ ಅವರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಹಾಗೂ ರಾಜ್ಯಪಾಲರಿಗೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿದ್ದು, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಉಪನಗರ ಠಾಣೆಗೆ ದೂರು ನೀಡಿದರು.

Advertisement

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ವೇಳೆ ಸಚಿವ ಜಮೀರ್ ಅಹ್ಮದ್ ಅವರು ರಾಜ್ಯದಲ್ಲಿ ಅಶಾಂತಿ ಮೂಡಿಸುವಂತಹ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಏನಾದರೂ ಗಲಾಟೆಗಳು ನಡೆದರೆ ಅದಕ್ಕೆ ರಾಜ್ಯಪಾಲರು ಹೊಣೆ ಎನ್ನುವ ಮೂಲಕ ಅವರಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಸಚಿವರ ವಿರುದ್ಧ ದೂರು ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದರು.

ಠಾಣೆ ಮುಂಭಾಗದಲ್ಲಿ ಕುಳಿತು ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರವಿರೋಧಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ಬಂಧಿಸುವಂತೆ ಘೋಷಣೆ ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next