Advertisement

ಹುಬ್ಬಳ್ಳಿ: ರಾಹುಲ್ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

12:31 PM Jun 17, 2022 | Team Udayavani |

ಹುಬ್ಬಳ್ಳಿ: ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ದುರ್ಬಳಿಕೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು‌.

Advertisement

ಶುಕ್ರವಾರ ಇಲ್ಲಿನ ನವನಗರದ ಆದಾಯ ತೆರಿಗೆ ಇಲಾಖೆ ಕಚೇರಿ ನುಗ್ಗಲು ಯತ್ನಿಸಿದರು. ಕೇಂದ್ರ ಸರಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಪ್ರತಿ ಪಕ್ಷವನ್ನು ಹತ್ತಿಕ್ಕುವ ಕೆಲಸ ಕೇಂದ್ರ ಬಿಜೆಪಿ ಸರಕಾರ ಮಾಡುತ್ತಿದೆ‌. ದೇಶದ ಇತಿಹಾಸದಲ್ಲಿ ಪ್ರತಿ ಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಕಾರ ಹಾಗೂ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಕಚೇರಿ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು.

ಇದನ್ನೂ ಓದಿ:ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ ಯೋಜನೆಗೆ ಸಿದ್ದರಾಮಯ್ಯ ವಿರೋಧ

ಶಾಸಕಿ ಕುಸುಮಾವತಿ ಶಿವಳ್ಳಿ, ಮುಖಂಡರಾದ ಅನೀಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರು, ಸದಾನಂದ ಡಂಗನವರ, ದೀಪ ಚಿಂಚೋರೆ, ರಜತ ಉಳ್ಳಾಗಡ್ಡಿಮಠ, ನಾಗರಾಜ ಗೌರಿ, ಬಸವರಾಜ ಗುರಿಕಾರ, ಬಸವರಾಜ ಕಿತ್ತೂರು, ದೀಪಾ ಗೌರಿ ಸೇರಿದಂತೆ ಇನ್ನಿತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next