Advertisement

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

02:44 PM Jun 23, 2024 | Team Udayavani |

ಹುಬ್ಬಳ್ಳಿ: ಆಕಾಶ ಮಠಪತಿ ಕೊಲೆಗೆ ಸಂಬಂಧಿಸಿ ಇಲ್ಲಿಯವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜುನ ಮಳಗಿ, ಸಂಜು ಕೊಪ್ಪದ, ರಾಹುಲ ಕಾಂಬಳೆ, ವಿನಾಯಕ ತಾಳಿಕೋಟಿ, ಮನೋಜ,‌ ಚಮಕ ಉರುಫ್ ಮೌನೇಶ, ಮಹೇಶ, ಕಾರ್ತಿಕ ರಾಜ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಕೊಲೆಯಾದ ಆಕಾಶ ಮಠಪತಿ ತಂದೆ ಶೇಖರಯ್ಯ ಅವರು ಘಟನೆಗೆ ಸಂಬಂಧಿಸಿ ಹೆಂಡತಿ ಕುಟುಂಬಸ್ಥರ‌ ಕುಮ್ಮಕ್ಕು ಮೇಲೆ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆತನ ಪತ್ನಿಯ ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿ ಹನ್ನೆರಡು ಜನರ ವಿರುದ್ಧ ಹಳೇಹುಬ್ಬಳ್ಳಿ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈಗಾಗಲೇ ಎಂಟು ಜನರನ್ನು ಬಂಧಿಸಲಾಗಿದ್ದು, ಇನ್ನುಳಿದಂತೆ ಪತ್ನಿ ಕಾವ್ಯಾ, ಅತ್ತೆ ಶ್ರೀದೇವಿ, ಮಾವ ಮೋಹನ, ಅಳಿಯ ಭರತ ನಾಯಕ ಅವರ ಪತ್ತೆ ಮಾಡಲಾಗುತ್ತಿದೆ ಎಂದರು.

ಪ್ರಾಥಮಿಕ ಮಾಹಿತಿ ಪ್ರಕಾರ ಆಕಾಶನ ತಲೆಗೆ ಹೊಡೆತ ಬಿದ್ದಿದೆ. ಮರಣೋತ್ತರ ಪರೀಕ್ಷೆ ಮತ್ತು ಎಫ್‌ಎಸ್‌ಎಲ್‌‌ನಿಂದ ವಿಸ್ತಾರ ವರದಿ ಬಂದ ನಂತರ ನಿಖರ ಮಾಹಿತಿ ದೊರೆಯಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next