Advertisement

ಹುಬ್ಬಳ್ಳಿ: ಸಚಿವ ಜಗದೀಶ್ ಶೆಟ್ಟರ್ ಸಮೀಪವೇ ಕುಸಿದ ಮಣ್ಣಿನ ದಿಬ್ಬ!

02:53 PM Jan 02, 2021 | Team Udayavani |

ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಅವರು, ರೈಲ್ವೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದ ವೇಳೆ ಸಮೀಪದಲ್ಲೇ ಮಣ್ಣಿನ ದಿಬ್ಬ ಕುಸಿದು ಬಿದ್ದು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.

Advertisement

ಇಲ್ಲಿನ ದೇಶಪಾಂಡೆ ನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸಲು ಕೃಷ್ಣಮಂದಿರ ಬಳಿ ಕೆಳ ಸೇತುವೆ ನಿರ್ಮಿಸಲಾಗುತ್ತಿದೆ. ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು, ಸಚಿವ ಶೆಟ್ಟರ ವೀಕ್ಷಿಸಿ, ಹೊರ ಬರುತ್ತಿದ್ದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ:ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು…: ಕುಮಾರಸ್ವಾಮಿ ಎಚ್ಚರಿಕೆ

ಸಚಿವರು, ಅಧಿಕಾರಿಗಳು, ಬಿಜೆಪಿ ಮುಖಂಡರಿದ್ದ ಅನತಿ ದೂರದಲ್ಲೇ ದಿಬ್ಬ ಕುಸಿದಿದೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next