Advertisement

Hubli: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಇರಿದು ಕೊಲೆ

12:32 AM Mar 23, 2024 | Team Udayavani |

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಆಪ್ತರೇ ಸ್ನೇಹಿತನನ್ನು ಇರಿದು ಕೊಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ಇಲ್ಲಿನ ಕೇಶ್ವಾಪುರ ನಾಗಶೆಟ್ಟಿಕೊಪ್ಪದ ಹನುಮಂತ ದೇವಸ್ಥಾನ ಬಳಿ ನಡೆದಿದೆ.

Advertisement

ಘಟನೆಯಲ್ಲಿ ನಾಗಶೆಟ್ಟಿಕೊಪ್ಪದ ಪ್ರಕಾಶ ಮಾನೆ (23) ಕೊಲೆಯಾಗಿದ್ದಾನೆ. ಸ್ನೇಹಿತರ ನಡುವೆ ಜಗಳವುಂಟಾದಾಗ ಕಿರಣ ಮತ್ತು ಸಂಗಮೇಶ ಎಂಬುವರು ಚಾಕು ಮತ್ತು ಕಟ್ಟಿಗೆಯಿಂದ ಪ್ರಕಾಶಗೆ ಹೊಡೆದಾಗ ಗಂಭೀರ ಗಾಯಗೊಂಡಿದ್ದಾನೆ. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸ್ಪಂದಿಸದೆ ಮೃತಪಟ್ಟಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next