Advertisement

Hubli: ಕಾಂಗ್ರೆಸ್ ನಿಂದ ಚುನಾವಣೆ ವೇಳೆ ಬಡವರ ಪರ ಎಂಬ ನಾಟಕ: ಪ್ರಹ್ಲಾದ ಜೋಶಿ

07:14 PM Jul 19, 2024 | Team Udayavani |

ಹುಬ್ಬಳ್ಳಿ: ಕಾಂಗ್ರೆಸ್ ಗೆ ಬಡವರ ಬಗ್ಗೆ ನಿಜವಾದ ಕಾಳಜಿ ಇಲ್ಲವೇ ಇಲ್ಲ. ಚುನಾವಣೆ ವೇಳೆ ಬಡವರ ಪರ ಎಂಬ ನಾಟಕ ಮಾಡುತ್ತಿದೆ. ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

Advertisement

ಬಿಜೆಪಿ ಆಡಳಿತದಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲಾಗುತ್ತದೆ ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ಇದೀಗ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವ ಸ್ಥಿತಿಗೆ ತಂದಿದೆ ಎಂದು ಅವರು ಟ್ವೀಟ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಅಂದಾಜು 47 ಕೋಟಿ ರೂ.ಗಳ ಬಾಕಿ ನೀಡದೆ ಕ್ಯಾಂಟೀನ್ ಗಳಿಗೆ ಬೀಗ ಹಾಕುವ ಸ್ಥಿತಿಗೆ ತಂದಿದೆ. ಗ್ಯಾರಂಟಿಗಳನ್ನು ನಿಭಾಯಿಸಲು ಆಗದೆ ಪರಿಶಿಷ್ಟರಿಗೆ ಮೀಸಲಿಟ್ಟ ಹಣಕ್ಕೂ ಸರ್ಕಾರ ಕೈ ಹಾಕಿದೆ. ಬಡವರ ಪರವಾಗಿ ತಮ್ಮ ಪಕ್ಷ ಎಂಬುದು ಕಾಂಗ್ರೆಸ್ ಹೇಳಿಕೆ ಕೇವಲ ಚುನಾವಣೆಯಲ್ಲಿ ಮತ ಗಳಿಕೆಯ ತಂತ್ರವಾಗಿದೆಯೇ ವಿನಃ ನೈಜ ಕಾಳಜಿ ಇಲ್ಲವೇ ಇಲ್ಲ ಎಂದು ಅವರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next