Advertisement

ಹುಬ್ಬಳ್ಳಿ-ಅಂಕೋಲಾ ರೈಲಿಗೆ ಅಸ್ತು; ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ

10:09 AM Mar 22, 2020 | Sriram |

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಪರಿಸರವಾದಿಗಳು ಮತ್ತು ಅರಣ್ಯ ಇಲಾಖೆಯ ವಿರೋಧದ ನಡುವೆಯೇ ರಾಜ್ಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿದೆ.

Advertisement

ಕಳೆದ ವಾರವಷ್ಟೇ ರಾಜ್ಯ ವನ್ಯಜೀವಿ ಮಂಡಳಿ ಯೋಜನೆ ಕೈಬಿಡುವ ನಿರ್ಧಾರ ಪ್ರಕಟಿಸಿತ್ತು. ಆದರೆ ಈಗ ಹಿಂದಿನ ನಿರ್ಧಾರ ವಾಪಸ್‌ ಪಡೆದು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಮಂಡಳಿ ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಆರ್‌.ವಿ. ದೇಶಪಾಂಡೆ, ಕಾರ್ಮಿಕ ಸಚಿವ ಮತ್ತು ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಟಾರ್‌ ಯಾವುದೇ ಕಾರಣಕ್ಕೂ ಯೋಜನೆ ಕೈಬಿಡಬಾರದು ಎಂದು ಆಗ್ರಹಿಸಿದರು.

ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿ ಮತ್ತು ರಪು¤ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಈ ಯೋಜನೆ ಅಗತ್ಯವಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಪಾದಿಸಿದರು.

ಸೌಮ್ಯಾ ರೆಡ್ಡಿ ರಾಜೀನಾಮೆ
ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಿರುವುದನ್ನು ಖಂಡಿಸಿ, ಶಾಸಕಿ ಸೌಮ್ಯಾ ರೆಡ್ಡಿ ಮಂಡಳಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಪರಿಸರವಾದಿಗಳ ವಾದ
ಹುಬ್ಬಳ್ಳಿ-ಅಂಕೋಲಾ ರೈಲು ಹಾದು ಹೋಗುವ ಪ್ರದೇಶ ಸಂಪೂರ್ಣ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರುವುದರಿಂದ ಸುಮಾರು 595 ಹೆಕ್ಟೇರ್‌ ಅರಣ್ಯ ನಾಶವಾಗುತ್ತದೆ. ಸುಮಾರು 5 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ. ಅಲ್ಲದೆ ಈ ಪ್ರದೇಶ ಜೀವ ವೈವಿಧ್ಯ ತಾಣವಾಗಿದ್ದು, ಆನೆ ಕಾರಿಡಾರ್‌ ಕೂಡ ಹಾದುಹೋಗಿದೆ. ಅನೇಕ ಅಳಿವಿನಂಚಿನಲ್ಲಿರುವ ವನ್ಯ ಪ್ರಾಣಿಗಳ ವಾಸಸ್ಥಾನವಾಗಿರುವುದರಿಂದ ಈ ಯೋಜನೆ ಕೈಗೆತ್ತಿಕೊಳ್ಳುವುದರಿಂದ ಜೀವ ವೈವಿಧ್ಯಕ್ಕೆ ಹಾನಿಯಾಗುತ್ತದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ -ಅಂಕೋಲಾ ರೈಲು ಯೋಜನೆಗೆ ಸಾಕಷ್ಟು ಹೋರಾಟ ಮಾಡಲಾಗಿದೆ. ಮಂಡಳಿ ಸಭೆಯಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದರು. ಆದರೆ ಈ ಯೋಜನೆ ಜಾರಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಔದ್ಯೋಗಿಕ ಮತ್ತು ರಪು¤ ಉದ್ಯಮಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಅಟಲ್‌ ಬಿಹಾರಿ ವಾಜಪೇಯಿ ಕಾಲದಲ್ಲಿಯೇ ಈ ಯೋಜನೆಗೆ ಶಂಕು ಸ್ಥಾಪನೆ ಮಾಡಲಾಗಿದೆ.
– ಜಗದೀಶ್‌ ಶೆಟ್ಟರ್‌, ಕೈಗಾರಿಕಾ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next