Advertisement

Shettar ಕಾಂಗ್ರೆಸ್ ಗೆ ಬಂದರೆ ಹುಬ್ಬಳ್ಳಿ ಸೆಂಟ್ರಲ್ ಟಿಕೆಟ್ ಫಿಕ್ಸ್: ಶಾಮನೂರು ಶಿವಶಂಕರಪ್ಪ

02:11 PM Apr 16, 2023 | Team Udayavani |

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಫಿಕ್ಸ್ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ನಮ್ಮ ಬೀಗರು. ಅವರನ್ನು ನಮ್ಮ ಮಗ ಪಕ್ಷಕ್ಕೆ ಕರೆಯುತ್ತಾನೆ. ಅವರು ಕಾಂಗ್ರೆಸ್‌ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಫಿಕ್ಸ್ ಎಂದರು.

ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಅವರು ಪಕ್ಷಕ್ಕೆ ಬರುವಂತೆ ಅವರ ಜೊತೆ ಮಾತನಾಡಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಅವರು ಕಾಂಗ್ರೆಸ್‌ ಗೆ ಬರಬಹುದು. ಬಿಜೆಪಿಯವರು ಇಂತಹ ಕೆಲಸ ಮಾಡಿಯೇ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಬಿಜೆಪಿಗೆ 60 ಸೀಟ್ ಸಹ ಬರುವುದಿಲ್ಲ ಎಂದರು.

ಇದನ್ನೂ ಓದಿ:Karnataka Polls: ಸಂಸದ ಸಂಗಣ್ಣ ಕರಡಿ ಮನವೊಲಿಕೆಗೆ ಸಿಎಂ, ಬಿಎಸ್ವೈ, ಕಟೀಲ್ ಯತ್ನ

ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಗೆ ಬಂದರೆ ಅವರಿಗೆ ಟಿಕೆಟ್ ಕೊಡಲೇಬೇಕಾಗುತ್ತದೆ, ಟಿಕೆಟ್ ಕೊಟ್ಟರೆ ಅವರು ಕಾಂಗ್ರೆಸ್ ಸೇರುವುದು ಪಕ್ಕ. ನಮ್ಮ ಮಗ ಅವರ ಬೀಗರು (ಜಗದೀಶ್ ಶೆಟ್ಟರ್) ಕಾಂಗ್ರೆಸ್‌ ಗೆ ಬರುವಂತೆ ಮಾತನಾಡುತ್ತಿದ್ದಾರೆ. ಕಾದು ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

ಜಗದೀಶ್ ಶೆಟ್ಟರ್ ಅವರೊಂದಿಗೆ ಕಾಂಗ್ರೆಸ್ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಮುಂದೆ ಏನಾಗುತ್ತದೆಯೋ ಕಾದು ನೋಡೋಣ. ರಾಜ್ಯದಲ್ಲಿ ಕಾಂಗ್ರೆಸ್ ಬಂಪರ್ ಹೊಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Advertisement

Udayavani is now on Telegram. Click here to join our channel and stay updated with the latest news.

Next