Advertisement

Hubli: ರಕ್ತಪತ್ರ ಚಳವಳಿ ಕೈಗೊಂಡ ಪೌರಕಾರ್ಮಿಕರು

04:24 PM Jul 22, 2024 | Team Udayavani |

ಹುಬ್ಬಳ್ಳಿ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಾಗೂ ಹೋರಾಟ ನಿರತ ಪೌರಕಾರ್ಮಿಕರ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿರುವುದನ್ನು ಖಂಡಿಸಿ ಪೌರಕಾರ್ಮಿಕರು ಸೋಮವಾರ ರಕ್ತಪತ್ರ ಚಳವಳಿ ಕೈಗೊಂಡರು.

Advertisement

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಐದು ದಿನಗಳಿಂದ ಇಲ್ಲಿನ ಪಾಲಿಕೆ ಆವರಣದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿರುವ ಪೌರ ಕಾರ್ಮಿಕರು, ಸೋಮವಾರ ರಕ್ತದಿಂದ ಮುಖ್ಯಮಂತ್ರಿಗೆ ಪತ್ರ ಬರೆದು ತಮ್ಮ ಹಕ್ಕೊತ್ತಾಯ ಈಡೇರಿಕೆಗೆ ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಹೋರಾಟ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಹೋರಾಟ ದಮನ ನಿಟ್ಟಿನಲ್ಲಿ ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಗೂ ನೋಟಿಸ್ ಜಾರಿ ಮಾಡುತ್ತಿರುವುದಕ್ಕೆ ಪೌರ ಕಾರ್ಮಿಕರು‌ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next