Advertisement

Hubli: ಕಾಂಗ್ರೆಸ್ ಕಾರ್ಯಕರ್ತರಿಂದ ಶೆಟ್ಟರ್ ಅವರಿಗೆ ಭವ್ಯ ಸ್ವಾಗತ

02:34 PM Apr 17, 2023 | Team Udayavani |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷಕ್ಕೆ ಇಂದಷ್ಟೇ ಸೇರ್ಪಡೆಯಾದ ಜಗದೀಶ ಶೆಟ್ಟರ ಅವರು ನಗರಕ್ಕೆ ಆಗಮಿಸಿದಾಗ ಅವರನ್ನು ಕಾಂಗ್ರೆಸ್ ಪಕ್ಷದ ಧುರೀಣರು ಮತ್ತು ಕಾರ್ಯಕರ್ತರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಿದರು.

Advertisement

ಶೆಟ್ಟರ ಅವರು ಶ್ಯಾಮನೂರ ಶಿವಶಂಕರಪ್ಪ ಅವರಿಗೆ ಸೇರಿದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ದಾವಣಗೆರೆಗೆ ಆಗಮಿಸಿ, ನಂತರ ಅಲ್ಲಿಂದ ನಗರಕ್ಕೆ ಅದೇ ಹೆಲಿಕಾಪ್ಟರ್ ನಲ್ಲಿ ಮಧ್ಯಾಹ್ನ 1:20 ಗಂಟೆ ಸುಮಾರಿಗೆ ಆಗಮಿಸಿದರು. ಅವರನ್ನು ನಿಲ್ದಾಣದಲ್ಲಿ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ರಜತ್ ಉಳ್ಳಾಗಡ್ಡಿಮಠ, ಗಿರೀಶ ಗದಿಗೆಪ್ಪಗೌಡರ ಪಕ್ಷದ ಶಾಲು ಹೊದಿಸಿ, ಹೂಗುಚ್ಛ ನೀಡಿ ಬರಮಾಡಿಕೊಂಡರು.

ಅವರ ಸ್ವಾಗತಕ್ಕಾಗಿ ಬೆಳಗ್ಗೆ 11 ಗಂಟೆಯಿಂದಲೇ ಕಾಯುತ್ತಿದ್ದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು.ಶೆಟ್ಟರ ಶೆಟ್ಟರ ಜಗದೀಶ ಶೆಟ್ಟರ, ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಿದರು.

ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ಪಾರಸಮಲ್ ಜೈನ, ರಜತ್ ಉಳ್ಳಾಗಡ್ಡಿಮಠ, ಗಿರೀಶ ಗದಿಗೆಪ್ಪಗೌಡರ, ಸದಾನಂದ ಡಂಗನವರ, ಪಾಲಿಕೆ ಸದಸ್ಯರಾದ ಇಮ್ರಾನ ಎಲಿಗಾರ, ಸಂದೀಲಕುಮಾರ, ಪ್ರಕಾಶ ಕ್ಯಾರಕಟ್ಟಿ, ದೇವಕಿ ಯೋಗಾನಂದ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next