Advertisement

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

06:52 PM Apr 18, 2024 | Team Udayavani |

ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಗೆ ಮನಸೋ ಇಚ್ಚೆ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

Advertisement

ಇಲ್ಲಿನ ಪ್ರತಿಷ್ಠಿತ ಬಿವಿಬಿ ಕಾಲೇಜಿನ ಆವರಣದಲ್ಲಿ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದವರು ವಿದ್ಯಾರ್ಥಿನಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಘಟನೆಯಿಂದ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿನಿ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿಯಾಗಿದ್ದಾರೆ.

ಮಾಸ್ಕ್ ಧರಿಸಿದ ಯುವಕನೊಬ್ಬ ನೇಹಾ ಅವರ ಮೇಲೆ ಮನಸ್ಸು ಇಚ್ಛೆ ಚಾಕುವಿನಿಂದ ಹಲ್ಲೇ ಮಾಡಿದ್ದಾನೆ. ಈ ದುಷ್ಕೃತ್ಯ ಎಸೆಗಿರುವ ಯುವಕ ಅದೇ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ.

ಚಾಕುವಿನಿಂದ ಇರಿದು ಕೊಲೆ ಮಾಡಿದ ಯುವಕನನ್ನು ಫಯಾಜ್ ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿ ಪರಾರಿಯಾಗುತ್ತಿದ್ದ ಫಯಾಜ್ ನನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಫಯಾಜ್ ಸವದತ್ತಿ ಮೂಲದ ಯುವಕನಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next