Advertisement

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

05:52 PM Sep 08, 2024 | Team Udayavani |

ಹುಬ್ಬಳ್ಳಿ: ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ರವಿವಾರ(ಸೆ.8) ಕೇಂದ್ರ ಸಚಿವ ಪ್ರಹ್ಲಾದ ಜೋಶಿ(Pralhad Joshi) ನಿವಾಸದೆದುರು ಮಹದಾಯಿ ಹೋರಾಟಗಾರ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisement

ಸಚಿವ ಪ್ರಹ್ಲಾದ ಜೋಶಿಯವರು ಮನೆಯಿಂದ ಹೊರ ಬರುತ್ತಿದ್ದಂತೆಯೇ ರೈತ ಮುಖಂಡ ಸುಭಾಷಚಂದ್ರ ಪಾಟೀಲ ಮತ್ತಿತರ ರೈತರು ಕಿಡಿಕಾರಿದರು.

ಗೋವಾ ರಾಜ್ಯಕ್ಕೆ ವಿದ್ಯುತ್ ಯೋಜನೆಗೆ ಅನುಮತಿ ನೀಡಲಾಗಿದೆ. ಆದರೆ ಕರ್ನಾಟಕದ ಮಹದಾಯಿಗೆ ಅನುಮತಿ ನಿರಾಕರಿಸಲಾಗಿದೆ. ಕಾರಣ ಯೋಜನೆಗೆ ಅನುಮತಿ ಕೊಡುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಬೇಕೆಂದು ರೈತರು ಆಗ್ರಹಿಸಿದರು.

ಈ ವೇಳೆ ಸಚಿವರು, ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿಲ್ಲ. ರಾಷ್ಟ್ರೀಯ ಹುಲಿ ಪ್ರಾಧಿಕಾರ ಯಾವುದೇ ವರದಿ ಕೊಟ್ಟಿಲ್ಲ. ಹೀಗಾಗಿ ವನ್ಯಜೀವಿ ಮಂಡಳಿ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ಸಮಜಾಯಿಷಿ ನೀಡಿದರು. ಆಗ ರೈತರ ಆಕ್ರೋಶ ಹೆಚ್ಚಾಗುತ್ತಿದ್ದಂತೆಯೇ ಮನೆಯೊಳಗೆ ಕರೆದು ಮಾತುಕತೆ ನಡೆಸಿದರು. ಆಗ ರೈತರು ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next