Advertisement

ಹುಬ್ಬಳ್ಳಿ: ಆನೆ ದಂತದ ಕಲಾಕೃತಿ ಮಾರಾಟ ಮಾಡುತ್ತಿದ್ದ ಐವರ ಬಂಧನ

02:24 PM Feb 16, 2023 | Team Udayavani |

ಹುಬ್ಬಳ್ಳಿ: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ದಂತಚೋರರನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Advertisement

ಎಡಿಜಿಪಿ ಸಿಐಡಿ ಬೆಂಗಳೂರು ಮತ್ತು ಪ್ರಭಾರ ಡಿಐಜಿಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗದವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯ ಸಿಬ್ಬಂದಿಯು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಆನೆ ದಂತದ ಕಲಾಕೃತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೊಲ್ಲಾಪುರ ಮೂಲದ ಸಾತ್ ಶಹಾಜನ್ ಜಮಾದಾರ, ವಿಜಯ ರಾಜಾರಾಂ ಕುಂಬಾರ, ಸಾಗರ ಸುಭಾಷ ಪುರಾಣಿಕ, ನಿಪ್ಪಾಣಿ ಮೂಲದ ವಿನಾಯಕ ನಾಮದೇವ ಕಾಂಬ್ಳೆ, ದಾನಜೀ ಪಾಂಡುರಂಗ ಪಾಟೀಲ ಎಂಬುವವರೇ ಬಂಧಿತರಾದವರು.

ಅಕ್ರಮವಾಗಿ ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿತರಿಂದ 384 ಗ್ರಾಂ ತೂಕದ ಆನೆಯ ದಂತದಿಂದ ತಯಾರಿಸಿದ ಅಲಂಕಾರಿಕ ಪೆಟ್ಟಿಗೆ, 112 ಗ್ರಾಂ ತೂಕದ ಕೆಂಪು ಹರಳು ಇರುವ ಒಂದು ಖಡ್ಗ, 350 ಗ್ರಾಂ ತೂಕದ ಆಯತಾಕಾರದ ಪೆಟ್ಟಿಗೆ, 279 ಗ್ರಾಂ ತೂಕದ ಒಂದು ಮೊಟ್ಟೆಯಾಕಾರದ ಪೆಟ್ಟಿಗೆ ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಾತ್ ಶಹಜಾನ ಜಮಾದಾರನನ್ನು ವಿಚಾರಣೆಗೊಳಪಡಿಸಿದಾಗ, ಆನೆ ದಂತದ ಅಲಂಕಾರಿಕ ವಸ್ತುಗಳನ್ನು ತನ್ನ ತಂದೆ ಶಹಜಾನ ಜಮಾದಾರ ರಾಜಸ್ಥಾನದಲ್ಲಿ ನಡೆಯುವ ಜಾತ್ರೆ, ಸಂತೆಗಳು, ಸಾಧುಸಂತರ ಬಳಿಯಿಂದ ಅನೇಕ ವರ್ಷಗಳ ಹಿಂದೆ ಸಂಗ್ರಹಿಸಿ ಮನೆಯಲ್ಲಿಟ್ಟಿದ್ದರು. ಅವುಗಳನ್ನು ಮಾರಾಟ ಮಾಡಿದರೆ ಸಾಕಷ್ಟು ಹಣ ಬರಬಹುದೆಂದು ತಿಳಿದು ಮಾರಾಟ ಮಾಡಲು ಬಂದಿರುವುದಾಗಿ ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

Advertisement

ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಪ್ರಸಾದ ಪಣೇಕರ್ ಹಾಗೂ ಸಿಬ್ಬಂದಿಗಳಾದ ಎಲ್.ಎ ಪಾಠಕ, ಅಶೋಕ ನಾಗರಹಳ್ಳಿ, ರವೀಂದ್ರ ಗೋಣೆನವರ, ಎಸ್.ಎಚ್‌. ಹುಲಗೇರ ಹಾಗೂ ದಿವ್ಯ ಎಸ್ ನಾಯ್ಕ ಅವರ ಕಾರ್ಯಕ್ಕೆ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next