Advertisement

Hubli; ಪೂಜಾರಿ ದೇವೇಂದ್ರಪ್ಪ ಹತ್ಯೆ ಪ್ರಕರಣ ತನಿಖೆಗೆ ಪ್ರತ್ಯೇಕ ತಂಡ ರಚನೆ: ಎನ್.ಶಶಿಕುಮಾರ್

02:29 PM Jul 22, 2024 | Team Udayavani |

ಹುಬ್ಬಳ್ಳಿ: ಇಲ್ಲಿನ ಎಪಿಎಂಸಿ ಎದುರಿನ ಶ್ರೀ ವೈಷ್ಣೋದೇವಿ ಮಂದಿರದ ಮುಖ್ಯ ಧರ್ಮದರ್ಶಿ, ಪೂಜಾರಿ ದೇವೇಂದ್ರಪ್ಪ (ದೇವಪ್ಪಜ್ಜ) ವನಹಳ್ಳಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಂತಕನ ಬಂಧನಕ್ಕೆ ಎಂಟು ತಂಡ ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುತ್ತೇವೆ. ಮಾಟ ಮಂತ್ರದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ವಿಚಾರದ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದರು.

ಮೃತ ದೇವೇಂದ್ರಪ್ಪರು ನವನಗರದ ವೈಷ್ಣೋದೇವಿ ದೇವಸ್ಥಾನ ಮತ್ತು ನರೇಂದ್ರ ಬಳಿಯ ಯಲ್ಲಮ್ಮ ದೇವಸ್ಥಾನದ ಪೂಜಾರಿಯಾಗಿದ್ದರು. ಇವರ ಬಳಿ ಸಮಸ್ಯೆ ಹೇಳಿಕೊಂಡು ಹತ್ತಾರು ಜನ ಬರುತ್ತಿದ್ದರು. ಅವರಿಗೆ ಪರಿಹಾರ ಸೂತ್ರಗಳನ್ನು ಹೇಳುತ್ತಿದ್ದರು ಎನ್ನಲಾಗಿದೆ. ಅವರ ಪುತ್ರ ಅಮೆರಿಕಾದಲ್ಲಿದ್ದಾರೆ. ಮಂಗಳವಾರ ಹುಬ್ಬಳ್ಳಿಗೆ ಬರುತ್ತಾರೆ. ಕುಟುಂಬದ ಸದಸ್ಯರು ಯಾವಾಗ ಮರಣೋತ್ತರ ಪರೀಕ್ಷೆ ಮಾಡಲು ಹೇಳುತ್ತಾರೆ ಆಗ ಮಾಡಿಸಿ ಕೊಡುತ್ತೇವೆ. ಸ್ವಗ್ರಾಮ ಕುಸುಗಲ್‌ನಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next