Advertisement

Hubli; ಸಿಎಂ ಭ್ರಷ್ಟಾಚಾರದಲ್ಲಿರುವಾಗ ಶಾಸಕರಿಗೆ ಯಾವ ಭಯ ಇರುತ್ತದೆ: ಪ್ರಹ್ಲಾದ ಜೋಶಿ

12:26 PM Aug 04, 2024 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಶಾಸಕರಿಗೆ ಭಯ ಇಲ್ಲದಂತಾಗಿದೆ. ಸಿದ್ದರಾಮಯ್ಯ ಶುದ್ದ ಹಸ್ತರಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ವಾಲ್ಮೀಕಿ ಹಗರಣದ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳದಿದ್ದರೆ ಕೂಡಲೇ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಸವಾಲು ಹಾಕಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ದಿನಕ್ಕೊಂದು ಭ್ರಷ್ಟಾಚಾರಗಳು ನಡೆಯುತ್ತಿವೆ. ಒಂದೂವರೆ ವರ್ಷದಲ್ಲಿ ಇವರ ಹಗರಣಗಳು ಮಿತಿ ಮೀರಿವೆ. ಯಾದಗಿರಿಯಲ್ಲಿ ದಲಿತ ಪೊಲೀಸ್ ಅಧಿಕಾರಿ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಅಲ್ಲಿನ ಶಾಸಕ ನಾಪತ್ತೆಯಾಗಿದ್ದಾರೆ. ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಶಾಸಕರಿಗೆ ಎಲ್ಲಿ ಭಯ ಇರುತ್ತದೆ ಎಂದು ಲೇವಡಿ ಮಾಡಿದರು.

ಹಿಂದುಳಿದ ವರ್ಗದವರು ಮುಖ್ಯಮಂತ್ರಿಯಾಗಿದ್ದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳುತ್ತಿರುವುದು ಅವರ ಹೇಡಿತನ ಹಾಗೂ ಭಾಗಿಯಾಗಿರುವುದನ್ನು ಸಾಬೀತು ಪಡಿಸಿದಂತಿದೆ. ಭ್ರಷ್ಟಾಚಾರ, ಅಪರಾಧ ಕೃತ್ಯಗಳಿಗೆ ಯಾವುದೇ ಸಮಾಜ, ಜಾತಿ, ಧರ್ಮವಿಲ್ಲ. ಈ ರೀತಿ ಹಿಂದುಳಿದ ನಾಯಕ ಎನ್ನುವ ಮೂಲಕ ಈ ಕೃತ್ಯಗಳಿಂದ ತಮ್ಮನ್ನು ಸಂರಕ್ಷಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇವರು ಶುದ್ದ ಹಸ್ತರಾಗಿದ್ದರೆ ಸಿಬಿಐ ತನಿಖೆಗೆ ಕೊಡಲಿ. ಆಯೋಗ, ನ್ಯಾಯಾಂಗ ತನಿಖೆ ಎಂಬುವುದು ತಮ್ಮನ್ನು ರಕ್ಷಿಸಿಕೊಳ್ಳಲು ಮಾಡಿರುವ ಕೆಲಸವಷ್ಟೇ ಎಂದರು

Advertisement

Udayavani is now on Telegram. Click here to join our channel and stay updated with the latest news.

Next