Advertisement

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

11:22 AM Apr 19, 2024 | Team Udayavani |

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಘಟನೆಯು ಅತ್ಯಂತ ದುಃಖಕರ, ಆಘಾತಕರ ಘಟನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಎಲ್ಲ ಕಡೆ ಕೊಲೆ ಸಾಮಾನ್ಯ ಎಂಬಂತಾಗಿದೆ. ಪೊಲೀಸರು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ನಮ್ಮ ರಾಜ್ಯ ಬಿಹಾರವಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಶುಕ್ರವಾರ ಬೆಳಿಗ್ಗೆ ಇಲ್ಲಿನ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವ್ಯಾರೂ ಇದನ್ನು ಊಹಿಸಿರಲಿಲ್ಲ

ಕಾಲೇಜು ಕ್ಯಾಂಪಸ್‌ನಲ್ಲಿ, ಅದೂ ಹಾಡಹಗಲೇ ಘಟನೆ ಹುಬ್ಬಳ್ಳಿಯಲ್ಲಂತೂ ನಡೆದಿದ್ದಿಲ್ಲ. ಇದು ಸಮಾಜದಲ್ಲಿ ಆಗುತ್ತಿರುವ ಕ್ಷೋಭೆ ತೋರಿಸುತ್ತದೆ. ಇಂಥ ಘಟನೆಗಳಿಂದ ಸಮಾಜದಲ್ಲಿ ಸಾಮರಸ್ಯದ ಕೊರತೆಯಾಗುತ್ತದೆ ಎಂದರು.

ರೌಡಿಗಳು, ಗೂಂಡಾಗಳಿಗೆ ಪೊಲೀಸರ ಹೆದರಿಕೆ ಇಲ್ಲದಂತಾಗಿದೆ. ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ನಾವು ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು ಅನ್ನುವಂತಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next